24.2 C
ಪುತ್ತೂರು, ಬೆಳ್ತಂಗಡಿ
September 2, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

ಲಾಯಿಲ: ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಲಾಯಿಲ ವತಿಯಿಂದ ಹಾಗೂ ವಡೋದರದ ವಾಸು ಹೆಲ್ತ್‌ಕೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಸುಶ್ರುತ ಜಯಂತಿಯ ಅಂಗವಾಗಿ ಅಗ್ನಿಕರ್ಮ ಆಧಾರಿತ ನೋವು ನಿವಾರಕ ಕಾರ್ಯಾಗಾರವನ್ನು ಜು.17ರಂದು ಆಯೋಜಿಸಲಾಯಿತು.

ಆಯುರ್ವೇದದ ವಿಶಿಷ್ಟ ಅನುಶಸ್ತ್ರ ಚಿಕಿತ್ಸೆಗಳಲ್ಲೊಂದಾದ ಅಗ್ನಿಕರ್ಮದ ಮೂಲಕ ವಿವಿಧ ರೀತಿಯ ಕೀಲುನೋವು, ಸ್ನಾಯುನೋವು, ಕುತ್ತಿಗೆ ಹಾಗೂ ಬೆನ್ನುನೋವು ಸೇರಿದಂತೆ ದೀರ್ಘಕಾಲದ ನೋವಿನ ಸಮಸ್ಯೆಗಳಿಗೆ ಚಿಕಿತ್ಸೆ ಹಾಗೂ ತಜ್ಞರ ಸಲಹೆಯನ್ನು ಕಾರ್ಯಾಗಾರದಲ್ಲಿ ನೀಡಲಾಯಿತು. ನೂರಕ್ಕೂ ಹೆಚ್ಚು ರೋಗಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಚಿಕಿತ್ಸೆ ಪಡೆದು ಇದರ ಸದುಪಯೋಗವನ್ನು ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಪ್ರಸನ್ನ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಬಿ.ಕೆ., ಶಲ್ಯತಂತ್ರ ವಿಭಾಗದ ಮುಖ್ಯಸ್ಥ ಡಾ. ರವಿಶಂಕರ್, ಶಲ್ಯತಂತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಸುಪ್ರೀತ್ ಲೋಬೊ, ಡಾ. ವೀಣಾ ಹಾಗೂ ಡಾ. ಲಿಯಾ ಉಪಸ್ಥಿತರಿದ್ದು, ರೋಗಿಗಳಿಗೆ ಅಗ್ನಿಕರ್ಮ ಚಿಕಿತ್ಸೆಯ ಮಹತ್ವ, ಅದರ ಉಪಯೋಗಗಳು ಹಾಗೂ ಆಯುರ್ವೇದದಲ್ಲಿ ನೋವು ನಿವಾರಣೆಯಲ್ಲಿ ಅದರ ಪರಿಣಾಮಕಾರಿತ್ವದ ಕುರಿತು ಮಾಹಿತಿ ನೀಡಿದರು.

ವಾಸು ಕಂಪನಿಯ ಪ್ರತಿನಿಧಿ ಗಣೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕಾರ ನೀಡಿದರು. ಸುಮಾರು 120ಕ್ಕೂ ಹೆಚ್ಚು ಜನ ಈ ಕಾರ್ಯಕ್ರಮದಲ್ಲಿ ಚಿಕಿತ್ಸೆಯನ್ನು ಪಡೆದರು.

Related posts

ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ವತಿಯಿಂದ ಹೊಸ್ತೋಟ ಶಾಲೆಯಲ್ಲಿ ಶ್ರಮದಾನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya
error: Content is protected !!