24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕಚೇರಿಯ ಎಂ. ಮೃತ್ಯುಂಜಯ, ಕೊರಗಪ್ಪ ಹೆಗ್ಡೆ, ಅನಿತಾ ಶಿಂಗಾಯಿ ಉಪ ತಹಸೀಲ್ದಾರ್ ಆಗಿ ಭಡ್ತಿ

ಬೆಳ್ತಂಗಡಿ : ಮೈಸೂರು ವಿಭಾಗದಲ್ಲಿ ಖಾಲಿವಿರುವ ಉಪ ತಹಸೀಲ್ದಾರ್ ವೃಂದದ ಹುದ್ದೆಗಳಿಗೆ ಪ್ರಥಮ ದರ್ಜೆ ಸಹಾಯಕರನ್ನು ಮುಂಭಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸಿ ಸರಕಾರ ಆದೇಶಿಸಿದೆ.

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ಎಂ. ಮೃತ್ಯುಂಜಯ ಅವರನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಚುನಾವಣೆ ಶಾಖೆಯ ಶಿರಸ್ತೇದಾರ್ ಆಗಿ ಮುಂಭಡ್ತಿ ಮಾಡಲಾಗಿದೆ. ಕೆಪಿಎಸ್ ಸಿ ಪರಿಕ್ಷೇಯಲ್ಲಿ ತೆರ್ಗೇಡೆ ಹೊಂದಿ ಕಳೆದ 7 ವರ್ಷಗಳಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಮೂಲತ ದಾವಣಗೆರೆ ಜಿಲ್ಲೆಯವರು.

ತಾಲೂಕು ಚುನಾವಣಾ ಶಾಖೆಯ ಪ್ರ. ದ. ಸಹಾಯಕರಾಗಿದ್ದ ಕೊರಗಪ್ಪ ಹೆಗ್ಡೆ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಉಪ ತಹಶೀಲ್ದಾರ್ ಆಗಿ ಬಣಕಲ್ ನಾಡಕಛೇರಿಗೆ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಕಳೆದ ಮೂರು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಅವರು ಮೂಲತ ಬೆಳ್ತಂಗಡಿಯವರು.

ತಾಲೂಕು ಕಚೇರಿಯ ಪ್ರ. ದ. ಸಹಾಯಕಿ ಅನಿತಾ ಶಿಂಗಾಯಿ ಅವರನ್ನು ಸುಳ್ಯ ತಾಲೂಕಿನ ತಾಲೂಕು ಕಚೇರಿಯ ಸಾಮಾಜಿಕ ಭಧ್ರತಾ ಶಾಖೆಗೆ ಮುಂಭಡ್ತಿ ಮಾಡಲಾಗಿದೆ. ಕೆಪಿಎಸ್ ಸಿ ಪರಿಕ್ಷೇಯಲ್ಲಿ ತೆರ್ಗೇಡೆ ಹೊಂದಿ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ವೃತ್ತಿ ಜೀವನ ಆರಂಭಿಸಿದ ಅವರು ಕಳೆದ 7 ವರ್ಷಗಳಿಂದ ಬೆಳ್ತಂಗಡಿಯಲ್ಲಿ ಸೇವೆ ಸಲ್ಲಿಸಿದ ಇವರು ಮೂಲತ ಬೆಳಾಗಾವಿ ಜಿಲ್ಲೆಯವರು.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya
error: Content is protected !!