July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ: ಬೆಳ್ತಂಗಡಿ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಮಂಗಳೂರು ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ತ್ಯಾಗರಾಜ್ ಅವರನ್ನು ಬೆಂಗಳೂರು ಗ್ರೇಟರ್ ಪ್ರಾಧಿಕಾರ (ಕೇಂದ್ರ ವಲಯ) ಕ್ಕೆ ವರ್ಗಾವಣೆ ಮಾಡಲಾಗಿದ್ದು. ತೆರವಾದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಭಾಗದ ಕ್ಯಾದಗಿ ವಲಯ ಅರಣ್ಯಾಧಿಕಾರಿ ಮಹೇಶ್ ಎಂ ದೇವಾಡಿಗ ಅವರನ್ನು ನೇಮಕ ಮಾಡಿ ಬೆಂಗಳೂರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೇ.28 ರಂದು ಆದೇಶ ಹೊರಡಿಸಿದ್ದರು.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ಟಿ. ಎನ್. ತ್ಯಾಗರಾಜ್ ಅವರು 2024 ಆಗಷ್ಟ್ 21ರಿಂದ  ಬೆಳ್ತಂಗಡಿ ಆರ್ ಎಫ್ ಓ ಆಗಿ ಕರ್ತವ್ಯ ಸೇವೆ ಸಲ್ಲಿಸಿದ್ದ ಜನಸ್ನೇಹಿ ಅಧಿಕಾರಿಯಾಗಿದ್ದರು.

ಪ್ರಸ್ತುತ ವಲಯ  ಅರಣ್ಯಾಧಿಕಾರಿ ಮಹೇಶ್ ಎಂ. ದೇವಾಡಿಗ ಅವರು ಜು.16 ರಂದು ಅಧಿಕಾರ ಸ್ವೀಕಾರಿಸಿಕೊಂಡಿದ್ದಾರೆ. ಇವರು ಸುಬ್ರಹ್ಮಣ್ಯದ ನೆಟ್ಟಣ ಡಿಪ್ಪೋ, ಚಿಕ್ಕಮಗಳೂರು, ಮೂಡಿಗೆರೆ, ಸಿದ್ದಾಪುರ ವಲಯದಲ್ಲಿ ಸೇವೆ ಸಲ್ಲಿಸಿದ್ದಾರೆ.

Related posts

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

Suddi Udaya
error: Content is protected !!