28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ: ಬೆಳ್ತಂಗಡಿ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಮಂಗಳೂರು ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ತ್ಯಾಗರಾಜ್ ಅವರನ್ನು ಬೆಂಗಳೂರು ಗ್ರೇಟರ್ ಪ್ರಾಧಿಕಾರ (ಕೇಂದ್ರ ವಲಯ) ಕ್ಕೆ ವರ್ಗಾವಣೆ ಮಾಡಲಾಗಿದ್ದು. ತೆರವಾದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಭಾಗದ ಕ್ಯಾದಗಿ ವಲಯ ಅರಣ್ಯಾಧಿಕಾರಿ ಮಹೇಶ್ ಎಂ ದೇವಾಡಿಗ ಅವರನ್ನು ನೇಮಕ ಮಾಡಿ ಬೆಂಗಳೂರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೇ.28 ರಂದು ಆದೇಶ ಹೊರಡಿಸಿದ್ದರು.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ಟಿ. ಎನ್. ತ್ಯಾಗರಾಜ್ ಅವರು 2024 ಆಗಷ್ಟ್ 21ರಿಂದ  ಬೆಳ್ತಂಗಡಿ ಆರ್ ಎಫ್ ಓ ಆಗಿ ಕರ್ತವ್ಯ ಸೇವೆ ಸಲ್ಲಿಸಿದ್ದ ಜನಸ್ನೇಹಿ ಅಧಿಕಾರಿಯಾಗಿದ್ದರು.

ಪ್ರಸ್ತುತ ವಲಯ  ಅರಣ್ಯಾಧಿಕಾರಿ ಮಹೇಶ್ ಎಂ. ದೇವಾಡಿಗ ಅವರು ಜು.16 ರಂದು ಅಧಿಕಾರ ಸ್ವೀಕಾರಿಸಿಕೊಂಡಿದ್ದಾರೆ. ಇವರು ಸುಬ್ರಹ್ಮಣ್ಯದ ನೆಟ್ಟಣ ಡಿಪ್ಪೋ, ಚಿಕ್ಕಮಗಳೂರು, ಮೂಡಿಗೆರೆ, ಸಿದ್ದಾಪುರ ವಲಯದಲ್ಲಿ ಸೇವೆ ಸಲ್ಲಿಸಿದ್ದಾರೆ.

Related posts

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya
error: Content is protected !!