July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮುಖ್ಯಅತಿಥಿಗಳಾಗಿ ಶಾಂತಿಲಾಲ್ ಜಾತಿಯಾ, ಉಸ್ತುವಾರಿ ನಿರೀಕ್ಷಕರು, ವಿಪತ್ತು ನಿರ್ವಹಣೆ, ದಕ್ಷಿಣ ಕನ್ನಡ, ಸುಭಾಷ್ ಶಿಂಧೆ, ಸಬ್ ಇನ್ಸ್‌ಪೆಕ್ಟರ್, 10ನೇ ಬೆಟಾಲಿಯನ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಬೆಂಗಳೂರು, ಪಾಟೀಲ್ ನಿವೇಶ್ , ಬಾಲಕೃಷ್ಣ, ರಾಘೆ ರಾಮಕೃಷ್ಣ ರಕ್ಷಣಾ ಸಿಬ್ಬಂದಿಗಳು ನ್ಯಾಷನಲ್ ಡಿಸಾಸ್ಟರ್ ರೆಸ್ಪಾನ್ಸ್ ಫೋರ್ಸ್ (NDRF), 10ನೇ ಬೆಟಾಲಿಯನ್ ತಂಡ, ಬೆಂಗಳೂರು (ಕರ್ನಾಟಕ) ಇವರು ಆಗಮಿಸಿದ್ದರು.

ಸುಭಾಷ್ ಶಿಂಧೆ ಮಾತನಾಡಿ ವಿಪತ್ತು ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಪ್ರಾತ್ಯಕ್ಷಿಕೆಯ ಮುಖಾಂತರ ನೀಡಿದರು. ಬಳಿಕ ಮಾತನಾಡಿದ ಶಾಂತಿಲಾಲ್ ಜಾಟಿಯಾ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಕುರಿತು ಮಾಹಿತಿಯನ್ನು ನೀಡಿದರು. ಜೊತೆಗೆ ವಿದ್ಯಾರ್ಥಿಗಳಿಗೆ ಓದಿನ ಮಹತ್ವ ಹಾಗೂ ಸಾಧನೆಯ ಹಾದಿ ಅದಕ್ಕೆ ಪಡಬೇಕಾದ ಕಷ್ಟ ಇತ್ಯಾದಿಗಳನ್ನು ಬಹಳ ಮಾರ್ಮಿಕವಾಗಿ ವಿವರಿಸಿದರು. ಕೆಲ ವಿದ್ಯಾರ್ಥಿಗಳು ತಮಗೆ ಬಂದಂತ ಸಂದೇಹಗಳನ್ನು ಪ್ರಶ್ನಿಸುವ ಮುಖಾಂತರ ನಿವಾರಿಸಿಕೊಂಡರು. ಶಾಲಾ ಸಹ ಶಿಕ್ಷಕಿ ಶ್ರೀಮತಿ ಕಾವ್ಯ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಸ್ವಾಗತಿಸಿದರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!