ಧರ್ಮಸ್ಥಳ: ಆರೋಗ್ಯ ಸಚಿವ ಯು.ಟಿ. ಖಾದರ್ ಜು.17ರಂದು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು.
ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು. ಸಚಿವರು ಆಗಮಿಸಿದಾಗ ಡಿ. ಹರ್ಷೇಂದ್ರ ಕುಮಾರ್ ಅವರು ಮಾಲಾರ್ಪಣೆಯೊಂದಿಗೆ ಸ್ವಾಗತಿಸಿದರು.















