July 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಎಸ್ ವೈ ಎಸ್ ರಾಜ್ಯ ಸಮಿತಿಯ ನಿರ್ದೇಶನದಂತೆ ಪ್ರತಿ ಸರ್ಕಲ್ ಮಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜು.17 ರಂದು ಗುರುವಾಯನಕೆರೆ ಎಸ್ ವೈ ಎಸ್ ಸರ್ಕಲ್ ವ್ಯಾಪ್ತಿಯಲ್ಲಿ ನಡೆಯಿತು.

ಗುರುವಾಯನಕೆರೆ ಪೇಟೆಯ ಸುತ್ತಮುತ್ತ ನಡೆದ ಈ ಕಾರ್ಯಕ್ರಮವು ಜನೋಪಯೋಗಿಯಾಗಿ ಸಂಪನ್ನಗೊಂಡಿತು. ಗುರುವಾಯನಕೆರೆ ಸರ್ಕಲ್ ಅಧ್ಯಕ್ಷ ಹಸೈನಾರ್ ಹಾಜಿ, ಕಾರ್ಯದರ್ಶಿ ರಝಾಕ್ ಸ‌ಅದಿ, ದ‌ಅವಾ ಕಾರ್ಯದರ್ಶಿ ಉಮರ್ ಹಾಜಿ, ಸಂಘಟನಾ ಕಾರ್ಯದರ್ಶಿ ಅಶ್ರಫ್, ಇಸಾಬ ಸಾಂತ್ವಾನ ಕಾರ್ಯದರ್ಶಿ ನಝೀರ್ ಕಾಂತಿಜಾಲ್, ಪರಪ್ಪು ಜಮಾಅತ್ ಕಾರ್ಯದರ್ಶಿ ಸೈಫುಲ್ಲಾ, ಎಸ್ ಎಸ್ ಎಫ್ ಡಿವಿಶನ್ ಅಧ್ಯಕ್ಷ ಇಸಾಕ್ ಮೊದಲಾದವರು ನೇತೃತ್ವ ವಹಿಸಿದ್ದರು.
ಸರ್ಕಲ್ ಸಮಿತಿ ನಾಯಕರು, ಯೂನಿಟ್ ನಾಯಕರು ಹಾಗೂ ಕಾರ್ಯಕರ್ತರು ಸಹಕರಿಸಿದರು. ಗುರುವಾಯನಕೆರೆ ಮುಖ್ಯ ಪೇಟೆಯ ಪ್ರಮುಖ ಕಡೆಗಳಲ್ಲಿ ಗಿಡಗಂಟಿ ತೆರವು, ಪ್ಲಾಸ್ಟಿಕ್‌ ತೆರವು ಹಾಗೂ ಇತರ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಯಿತು.

Related posts

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಪ್ರವೇಶ ಪರೀಕ್ಷೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಹರಿಕೃಷ್ಣ ಇವರು ರಾಷ್ಟ್ರ ಮಟ್ಟದಲ್ಲಿ ರ‍್ಯಾಂಕ್

Suddi Udaya

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ

Suddi Udaya
error: Content is protected !!