24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

ಬೆಳ್ತಂಗಡಿ : ಬಿ.ಸಿರೋಡ್ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಸೇರಿಸಿ “ಬಜರಂಗದಳ‌ದ ಮುಖಂಡ ಚೇತನ್” ಹಾಗೂ “ಬಜರಂಗದಳದ ಶಾಖೆಯಿಂದ ತರಬೇತಿ ಪಡೆದಿದ್ದ” ಎಂಬ ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಕೋಮು ಸೌಹಾರ್ದತೆ ಕದಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ದೂರು ದಾಖಲಿಸಲಾಗಿದೆ.

ಆರೋಪಿಯ ತಿರುಚಿದ ಭಾವಚಿತ್ರ ಹಾಗೂ ಪ್ರಚೋಧನಕಾರಿ ಸಂದೇಶಗಳನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಲಾಗಿದ್ದು ಈ ಸಂಬಂಧ ಕಾನೂನುಬಾಹಿರ ಕೃತ್ಯ ಎಸಗಿರುವ ರಶೀದ್ ಲಾಯಿಲ ಮತ್ತು ಅನ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya
error: Content is protected !!