September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

ಬೆಳ್ತಂಗಡಿ : ಬಿ.ಸಿರೋಡ್ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಸೇರಿಸಿ “ಬಜರಂಗದಳ‌ದ ಮುಖಂಡ ಚೇತನ್” ಹಾಗೂ “ಬಜರಂಗದಳದ ಶಾಖೆಯಿಂದ ತರಬೇತಿ ಪಡೆದಿದ್ದ” ಎಂಬ ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಕೋಮು ಸೌಹಾರ್ದತೆ ಕದಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ದೂರು ದಾಖಲಿಸಲಾಗಿದೆ.

ಆರೋಪಿಯ ತಿರುಚಿದ ಭಾವಚಿತ್ರ ಹಾಗೂ ಪ್ರಚೋಧನಕಾರಿ ಸಂದೇಶಗಳನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಲಾಗಿದ್ದು ಈ ಸಂಬಂಧ ಕಾನೂನುಬಾಹಿರ ಕೃತ್ಯ ಎಸಗಿರುವ ರಶೀದ್ ಲಾಯಿಲ ಮತ್ತು ಅನ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಹಾಗೂ ಸಂಸ್ಕೃತ ಸಪ್ತಾಹ ಉದ್ಘಾಟನೆ

Suddi Udaya

ಆನೆಗಳ ಹಾವಳಿ ನಿಯಂತ್ರಣಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ರಂಗಪೂಜೆ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya
error: Content is protected !!