ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಜೋಸೆಫ್ ಪಿ.ಎಸ್. ಅವರ ಅಧ್ಯಕ್ಷತೆಯಲ್ಲಿ ಜು.18 ರಂದು ಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ನಿರ್ದೇಶಕ ಚಂದ್ರಶೇಖರ್ ಅವರು ನೋಡಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿ ಮಾತನಾಡಿ ಗ್ರಾಮ ಸಭೆಯಲ್ಲಿ ತುಂಬಾ ವಿಷಯಗಳ ಚರ್ಚೆ ನಡೆದಿದೆ. ಗ್ರಾಮಕ್ಕೆ ಮತ್ತು ಪಂಚಾಯತ್ ಸಂಬಂದಿಸಿದ ಚರ್ಚೆಗಳನ್ನು ಮಾತ್ರ ಮಾಡಬೇಕು ಕೆಲವು ವಿಚಾರವನು ಎಲ್ಲಿ ಚರ್ಚೆ ಮಾಡಬೇಕು ಅಲ್ಲಿ ಮಾಡಬೇಕು ಎಂದರು.

ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿಯನ್ನು ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಸ್ವಾಗತಿಸಿ, ಸಭೆಯ ವರದಿ ವಾಚಿಸಿದರು. ಸಿಬ್ಬಂದಿಗಳು ಜಮಾ ಖರ್ಚಿನ ವಿವರವನ್ನು ಮಂಡಿಸಿ ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆಗಳನ್ನು ವಾಚಿಸಿದರು. ನಳಿನಾಕ್ಷಿ ವಂದಿಸಿದರು.















