24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

ಬೆಳ್ತಂಗಡಿ : ಬಿ.ಸಿರೋಡ್ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಸೇರಿಸಿ “ಬಜರಂಗದಳ‌ದ ಮುಖಂಡ ಚೇತನ್” ಹಾಗೂ “ಬಜರಂಗದಳದ ಶಾಖೆಯಿಂದ ತರಬೇತಿ ಪಡೆದಿದ್ದ” ಎಂಬ ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಕೋಮು ಸೌಹಾರ್ದತೆ ಕದಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ದೂರು ದಾಖಲಿಸಲಾಗಿದೆ.

ಆರೋಪಿಯ ತಿರುಚಿದ ಭಾವಚಿತ್ರ ಹಾಗೂ ಪ್ರಚೋಧನಕಾರಿ ಸಂದೇಶಗಳನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಲಾಗಿದ್ದು ಈ ಸಂಬಂಧ ಕಾನೂನುಬಾಹಿರ ಕೃತ್ಯ ಎಸಗಿರುವ ರಶೀದ್ ಲಾಯಿಲ ಮತ್ತು ಅನ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೆಯಿಟ್ ಲಿಫ್ಟಿಂಗ್ ನಲ್ಲಿ ಗರ್ಡಾಡಿಯ ರಕ್ಷಿತ್ ಪೈ ಪ್ರಥಮ ಸ್ಥಾನ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya
error: Content is protected !!