24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮರ್ಪಿತ ಸೇವೆಗೆ ಗೌರವದ ಬೀಳ್ಕೊಡುಗೆ – ಸಿಬ್ಬಂದಿ ಧನ್ಯ ಅವರಿಗೆ ಸೋಜಾ ಎಲೆಕ್ಟ್ರಾನಿಕ್ಸ್‌ನಿಂದ ಸನ್ಮಾನ

ಬೆಳ್ತಂಗಡಿ: ತಾಲೂಕಿನ ಗ್ರಾಹಕರ ವಿಶ್ವಾಸ ಗಳಿಸಿರುವ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ಹಲವು ಸಮಯಗಳಿಂದ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿದ್ದ ಧನ್ಯ ಅವರಿಗೆ ಬೀಳ್ಕೊಡುಗೆ ಸಮಾರಂಭವು ಜು 18ರಂದು ಸಂಸ್ಥೆಯ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬದ್ಯಾರು ಚರ್ಚ್‌ನ ಧರ್ಮಗುರು, ಫಾ ಎಲ್.ಎನ್ ಪಿಂಟೋ ಆಸ್ಪತ್ರೆಯ ಆಡಳಿತ ನಿರ್ದೇಶಕ ಫಾ.ರೋಶನ್ ಕ್ರಾಸ್ತ, ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್‌ನ ಮಾಲಕ, ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೋ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಸತ್ಯ ಭಟ್, ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ. ಕೋಟ್ಯಾನ್ ಬಳಂಜ, ಎಸ್.ಡಿ.ಪಿ.ಐ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಎಸ್.ಡಿ.ಪಿ.ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಬೆಳ್ತಂಗಡಿ ಮುಳಿಯ ಜ್ಯುವೆಲ್ಲರ್ಸ್‌ನ ವ್ಯವಸ್ಥಾಪಕ ಲೋಹಿತ್ ಕುಮಾರ್ ಹಾಗೂ ಸಾಮಾಜಿಕ ಕಾರ್ಯಕರ್ತ ಶೇಖರ್ ಲಾಯಿಲ ಉಪಸ್ಥಿತರಿದ್ದು ಧನ್ಯ ಅವರ ಸೇವೆಯನ್ನು ಶ್ಲಾಘಿಸಿ ಶುಭ ಹಾರೈಸಿದರು.

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯ ಮಾಲಕ ಅಲ್ಫೋನ್ಸಾ ಫ್ರಾಂಕೋ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಇಂಜಿನಿಯರ್ ರಾಹುಲ್ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya
error: Content is protected !!