July 21, 2026
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿಯನ್ನು ಉಪ್ಪಿನಂಗಡಿ ನಿವಾಸಿ ಶುಭರಾಜ್(28) ಎಂಬಾತ ಪುಸಲಾಯಿಸಿ ಬಲವಂತವಾಗಿ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಬಾಲಕಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿದಾಗ ಬಾಲಕಿ 5-6 ತಿಂಗಳ ಗರ್ಭಿಣಿಯಾಗಿದ್ದಾಳೆ‌ ಎಂದು ತಿಳಿದುಬಂದಿದೆ.

ಈ ಬಗ್ಗೆ ಬಾಲಕಿ ತಾಯಿ ನೀಡಿದ ದೂರಿನ ಜು.18 ರಂದು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿ ಶುಭರಾಜ್(28) ನನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ಜು‌.19 ರಂದು ಸಂಜೆ ಬಂಧಿಸಿ ವಿಚಾರಣೆ ನಡೆಸಿ ಜು.20 ರಂದು ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಿದ್ದು.ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!