July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಡಕಚೇರಿಗಳಲ್ಲಿ ಸರ್ವರ್ ಸಮಸ್ಯೆ-ಜನರು ಹೈರಾಣು

ಬೆಳ್ತಂಗಡಿ: ತಾಲೂಕಿನ ಪ್ರಸ್ತುತ ಬೆಳ್ತಂಗಡಿ, ಕೊಕ್ಕಡ, ವೇಣೂರು ನಾಡಕಚೇರಿಗಳಲ್ಲಿ ಸರ್ವರ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣ ಅಗತ್ಯ ಸೇವೆಗಳು ತಾತ್ಕಲಿಕವಾಗಿ ವಿಳಂಬಗೊಂಡಿದ್ದು ಸಾರ್ವಜನಿಕರು ಹೈರಾಣಾಗಿದ್ದಾರೆ.

ರಾಜ್ಯದ್ಯಾಂತ ನಾಡಕಚೇರಿಗಳಲ್ಲಿ ಈ ಸಮಸ್ಯೆ ಸೃಷ್ಟಿಯಾಗಿದೆ. ಒಂದೇಡೆ ಜಡಿ ಮಳೆ ಸುರಿಯುತ್ತಿದ್ದು ಸೋಮವಾರ ಸಂತೆಯ ಭರಾಟೆಯೊಂದಡೆಯಾದರೆ ಸಾರ್ವಜನಿಕರು ತಾಲೂಕು ಕಚೇರಿಗೆ ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ನಿವಾಸ ಪ್ರಮಾಣಪತ್ರ ಸಹಿತ ಇತರ ಸೇವೆಗಳಿಗೆ ಕಚೇರಿಗೆ ಆಗಮಿಸಿದ ಜನರು ಸರ್ವರ್ ಸಮಸ್ಯೆಯಿಂದ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಹೈರಣಾಗಿದ್ದಾರೆ.

ಕಳೆದ ಶನಿವಾರದಿಂದ ಈ ಸಮಸ್ಯೆ ಕಾಣಿಸಿಕೊಂಡಿದ್ದು ಜು.20ರಂದು ತೀವ್ರಗೊಂಡಿದೆ. ಇಂದು ಇದುವರೆಗೆ ಕೇವಲ 5/6 ಕಡತಗಳು ಮಾತ್ರ ಆನಲೈನ್‌ನಲ್ಲಿ ಸ್ವೀಕಾರಗೊಂಡಿದೆ. ಉಳಿದ ದಿನಗಳಲ್ಲಿ 60-65 ಕಡತಗಳು ಅಪ್ಲೋಡ್ ಆಗುತ್ತದೆ. ವಿದ್ಯಾರ್ಥಿಗಳು ಸಹಿತ ಇತರರ ಜಾತಿ ಆದಾಯ ಪ್ರಮಾಣ ಪತ್ರಕ್ಕೆ, ವಂಶವೃಕ್ಷ, ಪಿಂಚಣಿ ಸೇವೆಗಳಿಗೆ ಸರ್ವರ್ ಸಮಸ್ಯೆ ಭಾದಕವಾಗಿದ್ದು ಈ ಸಮಸ್ಯೆ ಎಂದು ಸರಿಯಾಗುತ್ತದೆ ಎಂಬುವುದು ಕಾದುನೋಡಬೇಕಿದೆ…

Related posts

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya
error: Content is protected !!