July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಅಳದಂಗಡಿಯಲ್ಲಿ ಆಯೋಜಿಸಲಾದ ತುಳುನಾಡ ಸಿಂಗಾರ ಕಾರ್ಯಕ್ರಮದ ಅಂಗವಾಗಿ ನಡೆದ ಮೂರರಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಯಶ್ವಿತ್ ಅಮೀನ್ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾನೆ.

ವಿದ್ಯಾರ್ಥಿಯ ಈ ಗಮನಾರ್ಹ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನ ಹಾಗೂ ಚಿತ್ರಕಲಾ ಶಿಕ್ಷಕ ಜಯರಾಮ್ ಪಿ. ಎಸ್. ಅವರ ಸಮರ್ಪಕ ತರಬೇತಿ ಮತ್ತು ಪ್ರೋತ್ಸಾಹ ಪ್ರಮುಖ ಕಾರಣವಾಗಿದೆ.

ವಿದ್ಯಾರ್ಥಿಯ ಈ ಸಾಧನೆಗೆ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕರು ಹಾಗೂ ಸಹಪಾಠಿಗಳು ಅಭಿನಂದನೆಗಳನ್ನು ಸಲ್ಲಿಸಿ, ಶುಭ ಹಾರೈಸಿದ್ದಾರೆ.

Related posts

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!