September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯದಲ್ಲಿ ‘ಕಲಾಮೃತಂ’ ಸಾಂಸ್ಕೃತಿಕ ಉತ್ಸವ ಯಶಸ್ವಿ

ಉಜಿರೆ: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯ (SDMCNYS), ಉಜಿರೆಯಲ್ಲಿ ಇತ್ತೀಚೆಗೆ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಕಲಾಮೃತಂ’ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮವನ್ನು ಪ್ರಕೃತಿ ಚಿಕಿತ್ಸಾ ವೈದ್ಯೆ, ಭರತನಾಟ್ಯ ಕಲಾವಿದೆ ಹಾಗೂ , ಬೆಂಗಳೂರಿನ ರಿದ್ಧಿ ನೇಚರ್ ಕ್ಯೂರ್ ಸೆಂಟರ್‌ನ ಸಂಸ್ಥಾಪಕಿ ಮತ್ತು ಮುಖ್ಯ ಸಲಹೆಗಾರರಾದ ಕ್ಷಮಾ ಅರ್ಹನ್ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಜೊತೆಗೆ ಕಲೆ, ಸಂಸ್ಕೃತಿ ಹಾಗೂ ಸೃಜನಶೀಲತೆಯನ್ನು ಬೆಳೆಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿ, ಇವು ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯ, ಉಜಿರೆಯ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಡಾ. ಸುಜಾತಾ ಕೆ. ಜೆ., ಸಾಂಸ್ಕೃತಿಕ ಸಂಯೋಜಕರಾದ ಡಾ. ಶಾಲ್ಮಲಿ ಸುನಿಲ್, ಹಾಗೂ ಪೌಷ್ಟಿಕಾಹಾರ ಮತ್ತು ಆಹಾರ ವಿಜ್ಞಾನ ವಿಭಾಗದ ಡೀನ್ ಡಾ. ಗೀತಾ ಬಿ. ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಎರಡು ದಿನಗಳ ಈ ಸಾಂಸ್ಕೃತಿಕ ಉತ್ಸವದಲ್ಲಿ ನೃತ್ಯ, ಯೋಗ, ಕರಕುಶಲ ಕಲೆ, ಚಿತ್ರಕಲೆ, ಗಾಯನ, ವಾದ್ಯ ಸಂಗೀತ, ಕಿರುಚಿತ್ರ ನಿರ್ಮಾಣ ಹಾಗೂ ನಾಟಕ ಸೇರಿದಂತೆ ವಿವಿಧ ಸ್ಪರ್ಧೆಗಳು ಮತ್ತು ಪ್ರದರ್ಶನಗಳು ನಡೆದವು. ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ತಂಡ ವಿಭಾಗಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆ, ಸೃಜನಶೀಲತೆ ಮತ್ತು ತಂಡದ ಮನೋಭಾವವನ್ನು ಅನಾವರಣಗೊಳಿಸಿದರು.

ಶೈಕ್ಷಣಿಕ ವರ್ಷ ಪೂರ್ತಿ ‘ಕಲಾಮೃತಂ’ ಅಂಗವಾಗಿ ಒಟ್ಟು 36 ಸಾಂಸ್ಕೃತಿಕ ಸ್ಪರ್ಧೆಗಳು ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆಯನ್ನು ಉತ್ತೇಜಿಸುವುದರ ಜೊತೆಗೆ ಅವರ ಸರ್ವತೋಮುಖ ಬೆಳವಣಿಗೆಗೆ ವೇದಿಕೆಯನ್ನು ಕಲ್ಪಿಸಲಾಯಿತು. ಇದುವರೆಗೆ ಒಟ್ಟು 36 ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಾಗಿದೆ.

ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಆಕರ್ಷಕ ಪ್ರದರ್ಶನಗಳು ಹಾಗೂ ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಕಾಲೇಜು ಆವರಣ ಸಂಭ್ರಮದ ವಾತಾವರಣದಿಂದ ಕಂಗೊಳಿಸಿತು.
ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ‘ಕಲಾಮೃತಂ’ ವಿದ್ಯಾರ್ಥಿಗಳ ಪ್ರತಿಭೆ, , ನಾಯಕತ್ವ ಮತ್ತು ತಂಡದ ಸಹಕಾರವನ್ನು ಅನಾವರಣಗೊಳಿಸಿದ ಯಶಸ್ವಿ ಸಾಂಸ್ಕೃತಿಕ ಉತ್ಸವವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Related posts

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!