July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಡಕಚೇರಿಗಳಲ್ಲಿ ಸರ್ವರ್ ಸಮಸ್ಯೆ-ಜನರು ಹೈರಾಣು

ಬೆಳ್ತಂಗಡಿ: ತಾಲೂಕಿನ ಪ್ರಸ್ತುತ ಬೆಳ್ತಂಗಡಿ, ಕೊಕ್ಕಡ, ವೇಣೂರು ನಾಡಕಚೇರಿಗಳಲ್ಲಿ ಸರ್ವರ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣ ಅಗತ್ಯ ಸೇವೆಗಳು ತಾತ್ಕಲಿಕವಾಗಿ ವಿಳಂಬಗೊಂಡಿದ್ದು ಸಾರ್ವಜನಿಕರು ಹೈರಾಣಾಗಿದ್ದಾರೆ.

ರಾಜ್ಯದ್ಯಾಂತ ನಾಡಕಚೇರಿಗಳಲ್ಲಿ ಈ ಸಮಸ್ಯೆ ಸೃಷ್ಟಿಯಾಗಿದೆ. ಒಂದೇಡೆ ಜಡಿ ಮಳೆ ಸುರಿಯುತ್ತಿದ್ದು ಸೋಮವಾರ ಸಂತೆಯ ಭರಾಟೆಯೊಂದಡೆಯಾದರೆ ಸಾರ್ವಜನಿಕರು ತಾಲೂಕು ಕಚೇರಿಗೆ ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ನಿವಾಸ ಪ್ರಮಾಣಪತ್ರ ಸಹಿತ ಇತರ ಸೇವೆಗಳಿಗೆ ಕಚೇರಿಗೆ ಆಗಮಿಸಿದ ಜನರು ಸರ್ವರ್ ಸಮಸ್ಯೆಯಿಂದ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಹೈರಣಾಗಿದ್ದಾರೆ.

ಕಳೆದ ಶನಿವಾರದಿಂದ ಈ ಸಮಸ್ಯೆ ಕಾಣಿಸಿಕೊಂಡಿದ್ದು ಜು.20ರಂದು ತೀವ್ರಗೊಂಡಿದೆ. ಇಂದು ಇದುವರೆಗೆ ಕೇವಲ 5/6 ಕಡತಗಳು ಮಾತ್ರ ಆನಲೈನ್‌ನಲ್ಲಿ ಸ್ವೀಕಾರಗೊಂಡಿದೆ. ಉಳಿದ ದಿನಗಳಲ್ಲಿ 60-65 ಕಡತಗಳು ಅಪ್ಲೋಡ್ ಆಗುತ್ತದೆ. ವಿದ್ಯಾರ್ಥಿಗಳು ಸಹಿತ ಇತರರ ಜಾತಿ ಆದಾಯ ಪ್ರಮಾಣ ಪತ್ರಕ್ಕೆ, ವಂಶವೃಕ್ಷ, ಪಿಂಚಣಿ ಸೇವೆಗಳಿಗೆ ಸರ್ವರ್ ಸಮಸ್ಯೆ ಭಾದಕವಾಗಿದ್ದು ಈ ಸಮಸ್ಯೆ ಎಂದು ಸರಿಯಾಗುತ್ತದೆ ಎಂಬುವುದು ಕಾದುನೋಡಬೇಕಿದೆ…

Related posts

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!