ಬೆಳ್ತಂಗಡಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ (ರಿ.) ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ನೌಕರರ ವಿವಿಧ ಪ್ರಮುಖ ಬೇಡಿಕೆಗಳು ಹಾಗೂ ಕಾನೂನು ಹೋರಾಟಗಳ ಕುರಿತು ಮಹತ್ವದ ಸಮಾಲೋಚನಾ ಸಭೆಯು ಜು. 19 ರಂದು ತಾಲೂಕು ಪಂಚಾಯತ್ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು.

ತಾಲೂಕು ಸಮಿತಿಯ ಅಧ್ಯಕ್ಷ ರುಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಗ್ರಾಮ ಪಂಚಾಯತ್ ನೌಕರರ ಹಿತರಕ್ಷಣೆ ಹಾಗೂ ಸೇವಾ ಭದ್ರತೆಗೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮಾ, ಜಿಲ್ಲಾಧ್ಯಕ್ಷ ಸತೀಶ್ ಎಂ. ನಾರಾವಿ, ಜಿಲ್ಲಾ ಕೋಶಾಧಿಕಾರಿ ನಾರಾಯಣ, ತಾಲೂಕು ಸಮಿತಿ ಕಾರ್ಯದರ್ಶಿ ಮೀನಾಕ್ಷಿ, ತಾಲೂಕು ಲೆಕ್ಕಾಧಿಕಾರಿ ಅಶೋಕ್ , ಲೆಕ್ಕ ಸಹಾಯಕ ಮಂಜು ಉಪಸ್ಥಿತರಿದ್ದರು.















