ಬೆಳ್ತಂಗಡಿ : ಭಜನಾ ಪರಿಷತ್ತಿನ ಬೆಳ್ತಂಗಡಿ ವಲಯದ ಭಜನಾ ತಂಡಗಳ ಸಮಾಲೋಚನಾ ಸಭೆಯು ಜು.17 ರಂದು ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ವಲಯ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಭಜನಾ ಪರಿಷತ್ತಿನ ರಾಜ್ಯ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ಭಜನಾ ಪರಿಷತ್ತಿನ ವಲಯ ಅಧ್ಯಕ್ಷ ಗಣೇಶ್ ಕನ್ನಾಜೆ, ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ವಲಯದ ಮೇಲ್ವಿಚಾರಕರಾದ ಜಿ ರವಿ, ವಲಯದ ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಮಾಲೋಚನ ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಮುಂದಿನ ಸಭೆಗೆ ವಲಯದ ಎಲ್ಲಾ ಭಜನಾ ಮಂಡಳಿಗಳನ್ನು ಆಮಂತ್ರಿಸಿ ಭಜನಾ ಪರಿಷತ್ತಿನ ವಲಯದಲ್ಲಿ ಪೂರ್ಣ ಪ್ರಮಾಣದ ಸಭೆಯನ್ನು ನಡೆಸಿ ಆ ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳುವಂತೆ ರಾಜ್ಯಾಧ್ಯಕ್ಷರು ಸಲಹೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಸ್ವಾಗತಿಸಿ, ಬೆಳ್ತಂಗಡಿ ಎ ವಿಭಾಗದ ಸೇವಾ ಪ್ರತಿನಿಧಿ ಕೇಶವ ಧನ್ಯವಾದವಿತ್ತರು.















