July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಆಟಿದ ಪೊಲಬು

ಪುಂಜಾಲಕಟ್ಟೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪುಂಜಾಲಕಟ್ಟೆ ಘಟಕ ಇದರ ಆಶ್ರಯದಲ್ಲಿ ನಡೆದ ಆಟಿದ ಪೊಲಬು ಕಾರ್ಯಕ್ರಮ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಜು.19 ರಂದು ನಡೆಯಿತು.

ಕಾರ್ಯಕ್ರಮದ ಸಮಾರೋಪದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ| ಯೋಗೀಶ್ ಕೈರೋಡಿ ಅವರು ಆಟಿ ತಿಂಗಳ ವಿಶೇಷತೆ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿ, ನಮ್ಮ ಹಿರಿಯರು ಹಸಿವು ಮತ್ತು ಆರೋಗ್ಯ ರಕ್ಷಣೆಗಾಗಿ ಗಿಡಮೂಲಿಕೆಗಳು ಪ್ರಕೃತಿದತ್ತವಾದ ಆಹಾರವನ್ನು ಬಳಸಿ ನೆಮ್ಮದಿಯಾಗಿದ್ದರು. ಆಟಿ ತಿಂಗಳ ಆಹಾರ ಕ್ರಮ ತನ್ನದೇ ವೈಶಿಷ್ಟ್ಯಗಳಿಂದ ಕೂಡಿದೆ. ಹಾಗಾಗಿ ಹೊಟ್ಟೆ ಹಾಗೂ ಮನಸ್ಸು ಸ್ವಚ್ಛವಾಗಿರುತ್ತಿತ್ತು. ಹಿರಿಯರು ಗೆಡ್ಡೆ ಗೆಣೆಸು, ಸಸ್ಯಗಳಲ್ಲಿ ಆಹಾರವನ್ನು ಕಂಡು ಹುಡುಕಿದ ಅಪಾಯದ ಹೋರಾಟದ ಬಗೆಯನ್ನು ನಾವು ನೆನಪಿಸಬೇಕು ಎಂದರು. ಬದಲಾವಣೆ ಅನಿವಾರ್ಯ, ಆದರೆ ನಾವು ಹಿಂದಿನ ಭೌತಿಕ ವಸ್ತುಗಳನ್ನು ಕಳಕೊಂಡಿರುವುದರ ಬಗ್ಗೆ ಚಿಂತಿಸದೆ ಪಡಕೊಂಡಿರುವ ಬಗ್ಗೆ ಸಂತೋಷ ಪಡಬೇಕು ಎಂದರು.

ಬಿ.ಸಿ.ರೋಡ್ ನ್ಯಾಯವಾದಿ ಶೈಲಜಾ ರಾಜೇಶ್ ಮಾತನಾಡಿ, ಆಟಿ ತಿಂಗಳ ತಿಂಡಿ ತಿನಸುಗಳಲ್ಲಿ ಔಷಧಿಯ ಗುಣಗಳಿರುವುದರಿಂದ ಹಿರಿಯರು ತೋರಿಸಿದ ಸಂಸ್ಕೃತಿಯನ್ನು ನಾವು ಮರೆಯಬಾರದು ಎಂದು ಹೇಳಿದರು.

ಘಟಕದ ಅಧ್ಯಕ್ಷ ಹರೀಂದ್ರ ಟಿ.ಪೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಆಟಿ ತಿಂಗಳಿನ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಪಿಲಾತಬೆಟ್ಟು ಪ್ರಾ.ಕೃ.ಸ.ಸಂಘದ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ, ಶ್ರೀ ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ., ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ್ ಪ್ರಭು ಮೂರ್ಜೆ, ಬಸವನಗುಡಿ ಶ್ರೀ ಬಸವೇಶ್ವರ ದೇವಸ್ಥಾನದ ಕಾರ್ಯದರ್ಶಿ ಧರ್ಣಪ್ಪ ಗೌಡ ಹಟ್ಟತ್ತೋಡಿ, ಯಕ್ಷಧ್ರವ ಪಟ್ಲ ಫೌಂಡೇಶನ್ ಟ್ರಸ್ಟಿ ಲಕ್ಷ್ಮಿ ಸಂಜೀವ ಶೆಟ್ಟಿ, ಮಹಿಳಾ ಘಟಕದ ಗೌರವಾಧ್ಯಕ್ಷೆ ಉಮಾ ಡಿ. ಗೌಡ, ಅಧ್ಯಕ್ಷೆ ಶಶಿಕಲಾ ಗೋಪಾಲ ಪೂಜಾರಿ, ಗೌರವಾಧ್ಯಕ್ಷ ಪುರುಷೋತ್ತಮ ಪೂಜಾರಿ ಬುಳೆಕ್ಕಿನಕೋಡಿ, ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಸಲಹೆಗಾರ ದಿನೇಶ್ ಶೆಟ್ಟಿ ಕಾವಳಕಟ್ಟೆ, ಉಪಾಧ್ಯಕ್ಷ ದಿವಾಕರ ದಾಸ್, ಘಟಕದ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಉದಯ ಕುಮಾರ್ ಶೆಟ್ಟಿ ಮೇಲ್ಮನೆ ಸ್ವಾಗತಿಸಿದರು. ಪ್ರ. ಕಾರ್ಯದರ್ಶಿ ಸತೀಶ್ ಆಚಾರ್ಯ ಬೆರ್ಕಳ ವಂದಿಸಿದರು. ರೇಖಾ ಶೆಟ್ಟಿ ಬಹುಮಾನ ವಿಜೇತರ ವಿವರ ವಾಚಿಸಿದರು. ಕಲಾವಿದ ಎಚ್.ಕೆ.ನೈನಾಡು ಕಾರ್ಯಕ್ರಮ ನಿರೂಪಿಸಿದರು.

ಬೆಳಗ್ಗೆ ಕಾರ್ಯಕ್ರಮವನ್ನು ಯಕ್ಷಧ್ರವ ಪಟ್ಲ ಫೌಂಡೇಶನ್ ಟ್ರಸ್ಟಿ ಲಕ್ಷ್ಮಿ ಸಂಜೀವ ಶೆಟ್ಟಿ ಉದ್ಘಾಟಿಸಿದರು. ಬಾಲಭವನ ಸೊಸೈಟಿ ಮಾಜಿ ಅಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್, ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಫೌಂಡೇಶನ್ ಟ್ರಸ್ಟಿ ವಸಂತ ಶೆಟ್ಟಿ ಕೇದಗೆ, ಗೌರವ ಸಲಹೆಗಾರ ಯಶೋಧರ ಶೆಟ್ಟಿ ದಂಡೆ, ಅಧ್ಯಕ್ಷ ಹರೀಂದ್ರ ಟಿ.ಪೈ, ಅಧ್ಯಕ್ಷೆ ಶಶಿಕಲಾ ಗೋಪಾಲ್ ಮತ್ತಿತರರಿದ್ದರು .

Related posts

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya
error: Content is protected !!