September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

ಬೆಳ್ತಂಗ ಡಿ: ತಾಲೂಕಿನ ಪಡಂಗಡಿ, ನೆರಿಯ, ಮಚ್ಚಿನ, ಕಳೆಂಜ ಮತ್ತು ಪಟ್ರಮೆ ಗ್ರಾಮ ಪಂಚಾಯ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆಗೊಂಡಿದ್ದಾರೆ. ಧರ್ಮಸ್ಥಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ನಾಗೇಶ್ ಅವರು ಪುತ್ತೂರು ತಾಲೂಕಿನ ಆರ್ಯಪು ಗ್ರಾ.ಪಂ.ನಿಂದ ವರ್ಗಾವಣೆಗೊಂಡು ಇಲ್ಲಿಗೆ ನೇಮಕಗೊಂಡಿದ್ದಾರೆ.

ನೆರಿಯ ಗ್ರಾ.ಪಂ. ಪಿಡಿಓ ಸುಮ ಎ.ಜೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಕ್ಕೆ ಗ್ರಾ.ಪಂ.ಗೆ ವರ್ಗಾವಣೆಯಾಗಿದ್ದಾರೆ. ಮಚ್ಚಿನ ಗ್ರಾಮ ಪಂಚಾಯತ್ ಪಿಡಿಒ ಗೌರಿಶಂಕರ್ ಸಣಕಲ್ಲು ಸುಲ್ಕೇರಿ ಗ್ರಾ.ಪಂ.ಗೆ ವರ್ಗಾವಣೆಗೊಂಡಿದ್ದಾರೆ. ಪಡಂಗಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸಫನಾ ಮುಲ್ಕಿ ತಾಲೂಕಿನ ಕಿಲ್ಪಾಡಿ ಗ್ರಾ.ಪಂ.ಗೆ ವರ್ಗಾವಣೆಯಾಗಿದ್ದಾರೆ. ಕಳೆಂಜ ಗ್ರಾ.ಪಂ.ಪಿಡಿಒ ಹೊನ್ನಮ್ಮ ಪಟ್ರಮೆ ಗ್ರಾ.ಪಂ.ಗೆ, ಮುಲ್ಕಿ ತಾಲೂಕು ಬಳ್ಕುಂಜೆ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ಜಗದೀಶ್ ಬೆಳ್ತಂಗಡಿಯ ಮೇಲಂತಬೆಟ್ಟು ಗ್ರಾ.ಪಂ.ಗೆ ವರ್ಗಾವಣೆಗೊಂಡಿದ್ದಾರೆ. ತೆರವುಗೊಂಡ ಸ್ಥಳಗಳಿಗೆ ಅಭಿವೃದ್ಧಿ ಅಧಿಕಾರಿಗಳ ನೇಮಕ ಪ್ರಕ್ರಿಯೆ ಚಾಲ್ತಿಯಲ್ಲಿದೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya
error: Content is protected !!