September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಡಕಚೇರಿಗಳಲ್ಲಿ ಸರ್ವರ್ ಸಮಸ್ಯೆ-ಜನರು ಹೈರಾಣು

ಬೆಳ್ತಂಗಡಿ: ತಾಲೂಕಿನ ಪ್ರಸ್ತುತ ಬೆಳ್ತಂಗಡಿ, ಕೊಕ್ಕಡ, ವೇಣೂರು ನಾಡಕಚೇರಿಗಳಲ್ಲಿ ಸರ್ವರ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣ ಅಗತ್ಯ ಸೇವೆಗಳು ತಾತ್ಕಲಿಕವಾಗಿ ವಿಳಂಬಗೊಂಡಿದ್ದು ಸಾರ್ವಜನಿಕರು ಹೈರಾಣಾಗಿದ್ದಾರೆ.

ರಾಜ್ಯದ್ಯಾಂತ ನಾಡಕಚೇರಿಗಳಲ್ಲಿ ಈ ಸಮಸ್ಯೆ ಸೃಷ್ಟಿಯಾಗಿದೆ. ಒಂದೇಡೆ ಜಡಿ ಮಳೆ ಸುರಿಯುತ್ತಿದ್ದು ಸೋಮವಾರ ಸಂತೆಯ ಭರಾಟೆಯೊಂದಡೆಯಾದರೆ ಸಾರ್ವಜನಿಕರು ತಾಲೂಕು ಕಚೇರಿಗೆ ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ನಿವಾಸ ಪ್ರಮಾಣಪತ್ರ ಸಹಿತ ಇತರ ಸೇವೆಗಳಿಗೆ ಕಚೇರಿಗೆ ಆಗಮಿಸಿದ ಜನರು ಸರ್ವರ್ ಸಮಸ್ಯೆಯಿಂದ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಹೈರಣಾಗಿದ್ದಾರೆ.

ಕಳೆದ ಶನಿವಾರದಿಂದ ಈ ಸಮಸ್ಯೆ ಕಾಣಿಸಿಕೊಂಡಿದ್ದು ಜು.20ರಂದು ತೀವ್ರಗೊಂಡಿದೆ. ಇಂದು ಇದುವರೆಗೆ ಕೇವಲ 5/6 ಕಡತಗಳು ಮಾತ್ರ ಆನಲೈನ್‌ನಲ್ಲಿ ಸ್ವೀಕಾರಗೊಂಡಿದೆ. ಉಳಿದ ದಿನಗಳಲ್ಲಿ 60-65 ಕಡತಗಳು ಅಪ್ಲೋಡ್ ಆಗುತ್ತದೆ. ವಿದ್ಯಾರ್ಥಿಗಳು ಸಹಿತ ಇತರರ ಜಾತಿ ಆದಾಯ ಪ್ರಮಾಣ ಪತ್ರಕ್ಕೆ, ವಂಶವೃಕ್ಷ, ಪಿಂಚಣಿ ಸೇವೆಗಳಿಗೆ ಸರ್ವರ್ ಸಮಸ್ಯೆ ಭಾದಕವಾಗಿದ್ದು ಈ ಸಮಸ್ಯೆ ಎಂದು ಸರಿಯಾಗುತ್ತದೆ ಎಂಬುವುದು ಕಾದುನೋಡಬೇಕಿದೆ…

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ (ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ) ದಂತ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!