24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ಗುತ್ಯಡ್ಕದಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ಟವರ್ ಲೋಕಾರ್ಪಣೆ

ಮಲವಂತಿಗೆ: ಪ್ರಕೃತಿಯ ಸುಂದರ ಮಡಿಲಲ್ಲಿರುವ ಎಳನೀರು ಪ್ರದೇಶದ ಇನ್ನಷ್ಟು ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಪ್ರವಾಸೋದ್ಯಮದಿಂದ ಪ್ರಕೃತಿಗೆ ಹಾನಿಯಾಗಬಾರದು, ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದುವರಿಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಅವರು ಮಲವಂತಿಗೆ ಗ್ರಾಮದ ಎಳನೀರು ಸಮೀಪದ ಗುತ್ಯಡ್ಕದಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ಟವರ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಶಾಸಕ ಹರೀಶ್ ಪೂಂಜ ಸುಮಾರು 13 ಕೋಟಿ ರೂ.ಗಿಂತ ಅಧಿಕ ವೆಚ್ಚದಲ್ಲಿ ಇಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದು ಶ್ಲಾಘನೀಯ. ದೇಶದ ಅಭಿವೃದ್ಧಿಯಲ್ಲಿ ಹಳ್ಳಿಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಶಾಸಕ ಹರೀಶ್ ಪೂಂಜ ಮಾತನಾಡಿ ಮುಂದಿನ ದಿನಗಳಲ್ಲಿ ಇಲ್ಲಿ ಹಂತ-ಹಂತವಾಗಿ ಇನ್ನಷ್ಟು ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಊರಿನವರು ಒಗ್ಗಟ್ಟಿನೊಂದಿಗೆ ಮುಂದುವರಿದು ಪರಸ್ಪರ ಅನ್ಯೋನ್ಯತೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುವುದು ಅಗತ್ಯ ಎಂದರು. ಮಲವಂತಿಗೆ ಗ್ರಾಪಂ ಮಾಜಿ ಅಧ್ಯಕ್ಷ ಪ್ರಕಾಶ್ ಜೈನ್, ಪ್ರಮುಖರಾದ ಗಣೇಶ್ ನಾವೂರು, ಅರವಿಂದ ಲಾಯಿಲ, ದಿನೇಶ್ ಗೌಡ, ಮಧುಸೂದನ್ ಮಲ್ಲ, ಗಣೇಶ್ ಗೌಡ, ಬಿಎಸ್ಸೆನ್ನೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ನೇತ್ರಾವತಿ ಪೀಕ್ ಪರಿಶೀಲನೆ: ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ನೇತ್ರಾವತಿ ಪೀಕ್ ಪ್ರದೇಶದ ಪರಿಶೀಲನೆ ನಡೆಸಿದರು. ಸುಮಾರು 10 ಕಿ.ಮೀ. ದುರ್ಗಮ ಪ್ರದೇಶವನ್ನು ಕಾಲ್ನಡಿಗೆ ಮೂಲಕ ಕ್ರಮಿಸಿ ಇಲ್ಲಿನ ಪರಿಸ್ಥಿತಿ ಅವಲೋಕಿಸಿದರು. ವನ್ಯಜೀವಿ ವಿಭಾಗದ ಅಧಿಕಾರಿಗಳಿಗೆ ಕೆಲವೊಂದು ಸಲಹೆ- ಸೂಚನೆಗಳನ್ನು ನೀಡಿದರು. ಇಲ್ಲಿನ ಅಭಿವೃದ್ಧಿ ಕುರಿತು ಯೋಜನೆ ರೂಪಿಸುವುದಾಗಿ ತಿಳಿಸಿದರು.

Related posts

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ನಿಂದ ಆರೋಗ್ಯ ರತ್ನ ಪ್ರಶಸ್ತಿ ಪ್ರದಾನ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya
error: Content is protected !!