September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯರಾದ ಶ್ರೀಮತಿ ಪರಿಮಳ ಜೈನ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶೇಕ್ ಲತಿಫ್ ರವರ ಉಪಸ್ಥಿತಿಯಲ್ಲಿ ಇಂದು ಸಭೆ ನಡೆಯಿತು.

ಸಭೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಸಮಾಜದ ಪ್ರಮುಖರು ಹಾಗೂ ಡಾ. ಕೆ ಜಯಕೀರ್ತಿ ಜೈನ್ ಧರ್ಮಸ್ಥಳ, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಮಹಾವೀರ್ ಜೈನ್ ದೆಪ್ಪುನಿ ಮುಂತಾದವರು ಭಾಗವಹಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖವಾಗಿ ತಸ್ತಿಕ್ ಕೊಡುತ್ತಿರುವ ಬಸದಿಗಳಿಗೆ ಸಹಾಯಕ ಪುರೋಹಿತರಿಗೂ ಗೌರವಧನ ನೀಡಬೇಕು. ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ಕೊಡಬೇಕು. ಆಯೋಗದ ಕಚೇರಿಗಳಲ್ಲಿ ಸಮಾಜದವರಿಗೆ ಉದ್ಯೋಗ ಅವಕಾಶಗಳನ್ನು ನೀಡಬೇಕು ಬಸದಿಗಳ ದಾಖಲೆಗಳನ್ನು ಸರಿಪಡಿಸಲು ಸಹಕರಿಸಬೇಕು. ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮುಂತಾದ ಹಲವಾರು ವಿಷಯಗಳನ್ನು ಅಧ್ಯಕ್ಷರ ಗಮನಕ್ಕೆ ತಂದು ಸರಕಾರಕ್ಕೆ ಶಿಫಾರಸ್ ಮಾಡುವಂತೆ ಮನವಿ ಸಲ್ಲಿಸಲಾಯಿತು.

Related posts

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya
error: Content is protected !!