July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತರಿಗೆ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ ಜು.21ರಂದು ನಡೆಯಿತು.

ಬೆಳ್ತಂಗಡಿ ಕೃಷಿ ಅಧಿಕಾರಿ ಗಣೇಶ್ ರವರು ಮೊಬೈಲ್ ಮೂಲಕವೇ ಬೆಳೆ ಸಮೀಕ್ಷೆ ಮಾಡು ಕುರಿತು ಮಾಹಿತಿ ನೀಡಿದರು. ಸುರೇಶ್ಚಂದ್‌ರ ತೊಟ್ಟೆತ್ತೋಡಿ ಸುಳ್ಯ ಹಾಗೂ ಎಡ್ವಾರ್ಡ್ ರೆಬೆಲ್ಲೋ ಮೂಡಬಿದ್ರೆ ಇವರಿಂದ ರೈತರ ಆದಾಯ ದ್ವಿಗುಣಗೊಳಿಸಲು ಅಡಿಕೆ ಜೊತೆಗೆ ಲಾಭದಾಯಕ ಬೆಳೆಗಳಾದ ಜಾಯಿಕಾಯಿ, ರಾಂಬೂಟನ್, ಕೋಕೋ, ಮ್ಯಾಂಗೋಸ್ಟೀನ್, ಕಾಳುಮೆಣಸು ಗಿಡಗಳನ್ನು ಬೆಳೆಸುವ, ಪೋಷಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಪ್ರೀತಮ್, ಉಪಾಧ್ಯಕ್ಷರು, ಮುಖ್ಯಕಾರ್ಯನಿರ್ವಹಣಾಧಿಕಾರಿ, ನಿರ್ದೇಶಕರು, ಸಿಬ್ಬಂದಿವರ್ಗ, ಉಪಸ್ಥಿತರಿದ್ದರು. ರೈತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು.

Related posts

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಇಂದಬೆಟ್ಟು ವಲಯದ ಸಭೆ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya
error: Content is protected !!