ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತರಿಗೆ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ ಜು.21ರಂದು ನಡೆಯಿತು.

ಬೆಳ್ತಂಗಡಿ ಕೃಷಿ ಅಧಿಕಾರಿ ಗಣೇಶ್ ರವರು ಮೊಬೈಲ್ ಮೂಲಕವೇ ಬೆಳೆ ಸಮೀಕ್ಷೆ ಮಾಡು ಕುರಿತು ಮಾಹಿತಿ ನೀಡಿದರು. ಸುರೇಶ್ಚಂದ್ರ ತೊಟ್ಟೆತ್ತೋಡಿ ಸುಳ್ಯ ಹಾಗೂ ಎಡ್ವಾರ್ಡ್ ರೆಬೆಲ್ಲೋ ಮೂಡಬಿದ್ರೆ ಇವರಿಂದ ರೈತರ ಆದಾಯ ದ್ವಿಗುಣಗೊಳಿಸಲು ಅಡಿಕೆ ಜೊತೆಗೆ ಲಾಭದಾಯಕ ಬೆಳೆಗಳಾದ ಜಾಯಿಕಾಯಿ, ರಾಂಬೂಟನ್, ಕೋಕೋ, ಮ್ಯಾಂಗೋಸ್ಟೀನ್, ಕಾಳುಮೆಣಸು ಗಿಡಗಳನ್ನು ಬೆಳೆಸುವ, ಪೋಷಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಪ್ರೀತಮ್, ಉಪಾಧ್ಯಕ್ಷರು, ಮುಖ್ಯಕಾರ್ಯನಿರ್ವಹಣಾಧಿಕಾರಿ, ನಿರ್ದೇಶಕರು, ಸಿಬ್ಬಂದಿವರ್ಗ, ಉಪಸ್ಥಿತರಿದ್ದರು. ರೈತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು.















