ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ಹೆದ್ದಾರಿಯ ಬೋಳಿಯಾರ್ ಸಮೀಪ ಇಂದು (ಜು.21) ಬೆಳಿಗ್ಗೆ 7ಗಂಟೆ ಸುಮಾರಿಗೆ
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದ ಕಾರಿಗೆ ಒಂಟಿ ಸಲಗ ಅಡ್ಡ ಬಂದ ಘಟನೆ ನಡೆದಿದೆ.
ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿದ ಕಾರಣ ಹಿಂದಿನಿಂದ ಬರುತ್ತಿದ್ದ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಾಂದರ್ಬಿಕ ಚಿತ್ರ















