ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ ಹಾಗೂ
ಗ್ರಾಮ ಪಂಚಾಯತ್ ಶಿಶಿಲ ಇದರ ಜಂಟಿ ಆಶ್ರಯದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಎಂಬ ಅರಿವು ಕಾರ್ಯಕ್ರಮ ಜು.20ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ವಲಯ ಮೇಲ್ವಿಚಾರಕಿ ನಾಗವೇಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಯಶೋದಾ ಸಾಮಾಜಿಕ ಕಾರ್ಯಕರ್ತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಂಗಳೂರು, ಹಾಗೂ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಹಾಗೂ ಎಮ್.ಬಿ.ಕೆ ಎಲ್.ಸಿ.ಆರ್.ಪಿ, ವಿವಿಧ ಸಖಿಗಳು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.















