July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ವಿಶೇಷ ಎನ್‌ಡಿಎ ಬ್ಯಾಚ್ ವಿದ್ಯಾರ್ಥಿಗಳಿಗಾಗಿ ದಿಗ್ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ 18 ಕರ್ನಾಟಕ ಬೆಟಾಲಿಯನ್ ಮಂಗಳೂರಿನ ಕಮಾಂಡಿಂಗ್ ಆಫೀಸರ್ ಆದ ಲೆಫ್ಟಿನೆಂಟ್ ಕರ್ನಲ್ ರೋಹಿತ್ ಪ್ರಕಾಶ್ ರೈ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಲೆಫ್ಟಿನೆಂಟ್ ಕರ್ನಲ್ ರೋಹಿತ್ ಪ್ರಕಾಶ್ ರೈ ಅವರು, “ಇತ್ತೀಚಿನ ದಿನಗಳಲ್ಲಿ ಯುದ್ಧವು ಕೇವಲ ನೆಲದ ಮೇಲೆ ನಡೆಯುತ್ತಿಲ್ಲ, ಅದು ತಾಂತ್ರಿಕತೆಯೊಂದಿಗೆ ನಡೆಯುತ್ತಿದೆ. ದೇಶದ ಸೇವೆ ಮಾಡಲು ಕೇವಲ ರೈಫಲ್ (ಬಂದೂಕು) ಹಿಡಿಯಬೇಕಾದ ಅಗತ್ಯವಿಲ್ಲ. ದೇಶದ ಒಬ್ಬ ಜವಾಬ್ದಾರಿಯುತ ಪ್ರಜೆಯಾಗಿ ನಾವು ಇರುವ ಸ್ಥಾನದಲ್ಲೇ ಇದ್ದುಕೊಂಡು ದೇಶದ ಸೇವೆ ಮಾಡಬಹುದು” ಎಂದು ಪ್ರೇರೇಪಿಸಿದರು.

ಇದೇ ವೇಳೆ ಅವರು ಪ್ಲಸ್ ಟು (ತರಗತಿ 12) ನಂತರ ರಕ್ಷಣಾ ಸೇವೆಗೆ ಸೇರಲು ಇರುವ ತಾಂತ್ರಿಕ ಪ್ರವೇಶ ಯೋಜನೆ (Technical Entry Scheme) ಮತ್ತು ವಿವಿಧ ಪ್ರವೇಶ ಯೋಜನೆಗಳ (Various Entry Schemes) ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಭಾರತದಲ್ಲೇ ಅತ್ಯಂತ ಕಠಿಣವಾದ ಸಂದರ್ಶನಗಳಲ್ಲಿ ಒಂದಾದ, ಎನ್‌ಡಿಎ ಪರೀಕ್ಷೆಯ ನಂತರ ನಡೆಯುವ ಎಸ್‌ಎಸ್‌ಬಿ ಸಂದರ್ಶನದ ಬಗ್ಗೆ ಅವರು ವಿಶೇಷ ಗಮನ ಹರಿಸಿದರು. ಸಂದರ್ಶನಕ್ಕೆ ಹೇಗೆ ತಯಾರಿ ನಡೆಸಬೇಕು, ಸಂವಹನ ಹಾಗೂ ಭಾಷಾ ಶೈಲಿ ಹೇಗಿರಬೇಕು ಮತ್ತು ಒಬ್ಬ ಸೇನಾ ಅಧಿಕಾರಿಯಾಗಲು ಇರಬೇಕಾದ ಮುಖ್ಯ ಗುಣಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಮುಖ ಟಿಪ್ಸ್ ನೀಡಿದರು.

ಎಕ್ಸೆಲ್ ಪಿಯು ಕಾಲೇಜಿನ ಎನ್‌ಡಿಎ ಬ್ಯಾಚ್ ವಿದ್ಯಾರ್ಥಿಗಳ ಜ್ಞಾನ ಮತ್ತು ಆಸಕ್ತಿಯನ್ನು ಕಂಡು ಅವರು ಪ್ರಶಂಸೆ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಎನ್‌ಡಿಎ ಮತ್ತು ಎಸ್‌ಎಸ್‌ಬಿ ಕುರಿತಾದ ತಮ್ಮ ವಿವಿಧ ಪ್ರಶ್ನೆಗಳನ್ನು ಕೇಳಿ ಮುಕ್ತವಾಗಿ ಸಂವಾದ ನಡೆಸಿದರು. ಎಕ್ಸೆಲ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಎನ್‌ಡಿಎ ಮತ್ತು ಎಸ್‌ಎಸ್‌ಬಿ ಸಂದರ್ಶನ ಎರಡಕ್ಕೂ ಅತ್ಯುತ್ತಮ ತರಬೇತಿ ಹಾಗೂ ಮಾರ್ಗದರ್ಶನವನ್ನು ನೀಡಲಾಗುತ್ತಿದೆ.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಮಾತನಾಡಿ, ಹತ್ತಾರು ಅವಕಾಶಗಳ ತ್ಯಜಿಸಿ ದೇಶ ಸೇವೆಗೆ ತೊಡಗುವ ಭಾರತೀಯ ಸೈನಿಕರ ಹಿರಿತನಕ್ಕೆ ಗೌರವ ಸಲ್ಲಬೇಕು ಎಂದರು. ಅರಮಲೆಬೆಟ್ಟ ಕ್ಯಾಂಪಸ್ ನ ಪ್ರಾಚಾರ್ಯ ಡಾ ಪ್ರಜ್ವಲ್ ಕಜೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್ ಡಿ ಎ ಸಂಯೋಜಕ ಜೋಸ್ಟಮ್ ಎ ಟಿ ಸ್ವಾಗತಿಸಿದರು. ಪ್ರಾಧ್ಯಾಪಕಿ ಸಹನಾ ವಂದಿಸಿದರು.ಎಸ್‌ಡಿಎಮ್ ಆರ್ಮಿ ಯೂನಿಟ್‌ನ ಮಾಜಿ ಎನ್‌ಸಿಸಿ ಕೆಡೆಟ್ ಶ್ರೀಮಂತ್ ಎಕ್ಸೆಲ್ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಅವರು ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಎನ್‌ಡಿಎ ಬ್ಯಾಚ್‌ನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!