ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯುವ ವಾರದ ಭಜನೆಯ ಸಂದರ್ಭದಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಬೇಟಿ ನೀಡಿದರು.
ಈ ವೇಳೆ ಇಲ್ಲಿನ ಪದಾಧಿಕಾರಿಗಳ ಬೇಡಿಕೆಯಂತೆ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿಗುವ ಅನುದಾನದ ಬಗ್ಗೆ ಮಾತ್ರವಲ್ಲದೆ ಸರ್ಕಾರದ ಬೇರೆ ಬೇರೆ ಇಲಾಖೆಗಳಿಂದ ಸಿಗುವ ಅನುದಾನಗಳ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ತಾಲೂಕು ಕಾರ್ಯದರ್ಶಿ ಚಂದ್ರಶೇಖರ ಗೌಡ ಇಂದಬೆಟ್ಟು, ವಲಯಾಧ್ಯಕ್ಷರಾದ ಗಣೇಶ್ ಕನ್ನಾಜೆ ಮತ್ತಿತರರು ಉಪಸ್ಥಿತರಿದ್ದರು.
ಭಜನಾ ಮಂಡಳಿಯ ಅಧ್ಯಕ್ಷರು ಸ್ವಾಗತಿಸಿ ವಂದಿಸಿದರು.















