23.8 C
ಪುತ್ತೂರು, ಬೆಳ್ತಂಗಡಿ
July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯರಾದ ಶ್ರೀಮತಿ ಪರಿಮಳ ಜೈನ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶೇಕ್ ಲತಿಫ್ ರವರ ಉಪಸ್ಥಿತಿಯಲ್ಲಿ ಇಂದು ಸಭೆ ನಡೆಯಿತು.

ಸಭೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಸಮಾಜದ ಪ್ರಮುಖರು ಹಾಗೂ ಡಾ. ಕೆ ಜಯಕೀರ್ತಿ ಜೈನ್ ಧರ್ಮಸ್ಥಳ, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಮಹಾವೀರ್ ಜೈನ್ ದೆಪ್ಪುನಿ ಮುಂತಾದವರು ಭಾಗವಹಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖವಾಗಿ ತಸ್ತಿಕ್ ಕೊಡುತ್ತಿರುವ ಬಸದಿಗಳಿಗೆ ಸಹಾಯಕ ಪುರೋಹಿತರಿಗೂ ಗೌರವಧನ ನೀಡಬೇಕು. ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ಕೊಡಬೇಕು. ಆಯೋಗದ ಕಚೇರಿಗಳಲ್ಲಿ ಸಮಾಜದವರಿಗೆ ಉದ್ಯೋಗ ಅವಕಾಶಗಳನ್ನು ನೀಡಬೇಕು ಬಸದಿಗಳ ದಾಖಲೆಗಳನ್ನು ಸರಿಪಡಿಸಲು ಸಹಕರಿಸಬೇಕು. ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮುಂತಾದ ಹಲವಾರು ವಿಷಯಗಳನ್ನು ಅಧ್ಯಕ್ಷರ ಗಮನಕ್ಕೆ ತಂದು ಸರಕಾರಕ್ಕೆ ಶಿಫಾರಸ್ ಮಾಡುವಂತೆ ಮನವಿ ಸಲ್ಲಿಸಲಾಯಿತು.

Related posts

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya
error: Content is protected !!