September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯರಾದ ಶ್ರೀಮತಿ ಪರಿಮಳ ಜೈನ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶೇಕ್ ಲತಿಫ್ ರವರ ಉಪಸ್ಥಿತಿಯಲ್ಲಿ ಇಂದು ಸಭೆ ನಡೆಯಿತು.

ಸಭೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಸಮಾಜದ ಪ್ರಮುಖರು ಹಾಗೂ ಡಾ. ಕೆ ಜಯಕೀರ್ತಿ ಜೈನ್ ಧರ್ಮಸ್ಥಳ, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಮಹಾವೀರ್ ಜೈನ್ ದೆಪ್ಪುನಿ ಮುಂತಾದವರು ಭಾಗವಹಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖವಾಗಿ ತಸ್ತಿಕ್ ಕೊಡುತ್ತಿರುವ ಬಸದಿಗಳಿಗೆ ಸಹಾಯಕ ಪುರೋಹಿತರಿಗೂ ಗೌರವಧನ ನೀಡಬೇಕು. ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ಕೊಡಬೇಕು. ಆಯೋಗದ ಕಚೇರಿಗಳಲ್ಲಿ ಸಮಾಜದವರಿಗೆ ಉದ್ಯೋಗ ಅವಕಾಶಗಳನ್ನು ನೀಡಬೇಕು ಬಸದಿಗಳ ದಾಖಲೆಗಳನ್ನು ಸರಿಪಡಿಸಲು ಸಹಕರಿಸಬೇಕು. ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮುಂತಾದ ಹಲವಾರು ವಿಷಯಗಳನ್ನು ಅಧ್ಯಕ್ಷರ ಗಮನಕ್ಕೆ ತಂದು ಸರಕಾರಕ್ಕೆ ಶಿಫಾರಸ್ ಮಾಡುವಂತೆ ಮನವಿ ಸಲ್ಲಿಸಲಾಯಿತು.

Related posts

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya
error: Content is protected !!