July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

ಉಜಿರೆ: “ದೈನಂದಿನ ಜೀವನದ ಸರಳ ವ್ಯಾಪಾರ-ವಹಿವಾಟಿನಿಂದ ಹಿಡಿದು ಬಾಹ್ಯಾಕಾಶ ತಂತ್ರಜ್ಞಾನದವರೆಗೆ ಪ್ರತಿಯೊಂದು ರಂಗದಲ್ಲೂ ಗಣಿತದ ಪಾತ್ರ ಅತ್ಯಂತ ಅನಿವಾರ್ಯವಾಗಿದೆ,” ಎಂದು ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ E&C ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಮಿತ್ ಕೆ. ಜೈನ್ ಹೇಳಿದರು.

ಅವರು ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಗಣಿತ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ‘ಸಿಗ್ಮಾ’ ಅಸೋಸಿಯೇಷನ್-ನ ಉದ್ಘಾಟನೆ ಮಾಡಿ ನಂತರ “ಖರೀದಿಯಿಂದ ಬಾಹ್ಯಾಕಾಶ ಎಂಜಿನಿಯರಿಂಗ್‌ವರೆಗೆ ಗಣಿತದ ಪಾತ್ರ” ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ನೀಡಿದರು.

ಈ ವೇಳೆ ದೈನಂದಿನ ಜೀವನದಲ್ಲಿ ಗಣಿತದ ಅನ್ವಯಿಕತೆ, ತಾಂತ್ರಿಕ ಪ್ರಗತಿಯಲ್ಲಿ ಅದರ ಕೊಡುಗೆ ಹಾಗೂ ಗಣಿತ ಕಲಿಕೆಯಿಂದ ದೊರೆಯುವ ಉದ್ಯೋಗಾವಕಾಶಗಳ ಕುರಿತು ಪ್ರಾಯೋಗಿಕ ಉದಾಹರಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.


ಇ-ಮ್ಯಾಗಝಿನ್ ಬಿಡುಗಡೆ : ಇದೇ ಸಂದರ್ಭದಲ್ಲಿ ಗಣಿತ ವಿಭಾಗದ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಹಾಗೂ ಗಣಿತಾಸಕ್ತಿಯಿಂದ ಸಿದ್ಧಪಡಿಸಿದ ಇ- ಮ್ಯಾಗಝಿನ್ ಹಾಗೂ ಭಿತ್ತಿ ಪತ್ರಿಕೆಗಳನ್ನು ಬಿಡುಗಡೆಗೊಳಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣಿತ ವಿಭಾಗದ ಮುಖ್ಯಸ್ಥ ಹಾಗೂ ಕಾಲೇಜಿನ ಪರೀಕ್ಷಾಂಗದ ಕುಲಸಚಿವರಾದ ಗಣೇಶ್ ನಾಯಕ್ ಬಿ. ವಹಿಸಿದ್ದರು. ವಿದ್ಯಾರ್ಥಿನಿ ಕೃತಿ ಪ್ರಾರ್ಥಿಸಿದರು. ಶಿಲ್ಪಾ ಸ್ವಾಗತಿಸಿ, ವಿದ್ಯಾರ್ಥಿನಿ ನಮ್ರತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya
error: Content is protected !!