September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ದಲಿತ ಚಳವಳಿಯನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕ ಎಂ ದೇವದಾಸ್ ಅವರ ನಿಧನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಗೆ ತುಂಬಲಾಗದ ನಷ್ಟ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಳ್ತಂಗಡಿ ತಾಲೂಕು ಸಮಿತಿ ಸಂತಾಪ ಸೂಚಿಸಿದೆ.

ರಾಜ್ಯದ ದಲಿತ ಚಳವಳಿಯ ಹಿರಿಯ ಕೊಂಡಿಯಾಗಿರುವ ದೇವದಾಸ್ ರವರ ನಿಧನ ಇಡೀ ಚಳವಳಿಗೆ ದುಃಖವನ್ನು ತಂದಿದೆ. ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಪ್ರಗತಿಪರ ಚಳವಳಿಗೂ ಅಪಾರ ಕೊಡುಗೆ ನೀಡಿದ್ದಾರೆ. ಅವರ ಕುಟುಂಬದ ದುಃಖದಲ್ಲಿ ದಲಿತ ಸಂಘರ್ಷ ಸಮಿತಿಯ ಎಲ್ಲಾ ಕಾರ್ಯಕರ್ತರು , ಪದಾಧಿಕಾರಿಗಳು ಭಾಗಿಯಾಗಿದ್ದೇವೆ ಎಂದು ದಸಂಸ(ಅಂಬೇಡ್ಕರ್ ವಾದ) ದ ಮೈಸೂರು ವಿಭಾಗ ಸಂ ಸಂಚಾಲಕ ಬಿ.ಕೆ ವಸಂತ , ತಾಲೂಕು ಸಂಚಾಲಕ ರಮೇಶ್ ಆರ್ , ಪದಾಧಿಕಾರಿಗಳಾದ ಶೇಖರ್ ಕುಕ್ಕೇಡಿ , ವೆಂಕಣ್ಣ ಕೊಯ್ಯೂರು , ಶ್ರೀಧರ್ ಕಳೆಂಜ , ನೇಮಿರಾಜ್ , ನಾರಾಯಣ ಪುದುವೆಟ್ಟು ಕೆ.ನೇಮಿರಾಜ್ ಕಿಲ್ಲೂರು , ಶೇಖರ್ ಕಣಿಯೂರು , ದಲಿತ ನಾಯಕರುಗಳಾದ ಸಂಜೀವ ಆರ್ , ಪ್ರಭಾಕರ್ ಶಾಂತಿಗೋಡು , ಚೆನ್ನಕೇಶವ , ಅಚುಶ್ರೀ ಬಾಂಗೇರು , ಶೇಖರ್ ಲಾಯಿಲ ಮಲೆಕುಡಿಯ ಸಂಘದ ಮುಖಂಡ ಜಯಾನಂದ ಪಿಲಿಕಲ ಸಂತಾಪ ಸೂಚಿಸಿದ್ದಾರೆ ‌.

Related posts

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya
error: Content is protected !!