September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆಯಲ್ಲಿ ಹೊಂಡಗಳ ಹಾವಳಿ: ವಾಹನ ಸವಾರರ ಪರದಾಟ – ತಕ್ಷಣ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

ಬೆಳ್ತಂಗಡಿ: ಗುರುವಾಯನಕೆರೆ ಕೆರೆಯ ಸಮೀಪ ರಾಜ್ಯ ಹೆದ್ದಾರಿಯ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು,ವಾಹನ ಸವಾರರು ಪ್ರತಿದಿನ ಸಂಕಷ್ಟ ಅನುಭವಿಸುವಂತಾಗಿದೆ. ರಸ್ತೆಯಲ್ಲಿ ಉಂಟಾಗಿರುವ ದೊಡ್ಡ ದೊಡ್ಡ ಹೊಂಡಗಳಿಂದಾಗಿ ವಾಹನಗಳನ್ನು ಚಲಾಯಿಸುವುದು ಸವಾಲಾಗಿ ಪರಿಣಮಿಸಿದ್ದು, ಅಪಘಾತದ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಗುಂಡಿಗಳನ್ನು ತಪ್ಪಿಸಲು ವಾಹನ ಸವಾರರು ಹರಸಾಹಸ ಪಡುತ್ತಿದ್ದು, ಎದುರಿನಿಂದ ಬರುವ ವಾಹನಗಳಿಗೆ ಜಾಗ ಬಿಡುವ ಸಂದರ್ಭಗಳಲ್ಲಿ ಅಪಾಯದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಕ್ಕೆ ತೆರಳುವ ಸಿಬ್ಬಂದಿ ಹಾಗೂ ಸಾರ್ವಜನಿಕರು ಪ್ರತಿನಿತ್ಯ ಇದೇ ರಸ್ತೆಯನ್ನು ಅವಲಂಬಿಸಿರುವುದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮಳೆ ನೀರು ಹೊಂಡಗಳಲ್ಲಿ ನಿಂತಿರುವುದರಿಂದ ಅವುಗಳ ಆಳ ಅರಿಯಲು ಸಾಧ್ಯವಾಗದೆ ದ್ವಿಚಕ್ರ, ಕಾರುಗಳ ವಾಹನ ಸವಾರರು ಹೆಚ್ಚಾಗಿ ಅಪಾಯಕ್ಕೆ ಸಿಲುಕುತ್ತಿದ್ದಾರೆ. ಈ ರಸ್ತೆ ಮೂಲಕ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದರೂ, ಸಂಬಂಧಪಟ್ಟ ಇಲಾಖೆ ಇದುವರೆಗೆ ಶಾಶ್ವತ ದುರಸ್ತಿ ಕಾಮಗಾರಿ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಗಮನಹರಿಸಿ,ರಸ್ತೆ ದುರಸ್ತಿಗೊಳಿಸಿ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya
error: Content is protected !!