22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆಯಲ್ಲಿ ಹೊಂಡಗಳ ಹಾವಳಿ: ವಾಹನ ಸವಾರರ ಪರದಾಟ – ತಕ್ಷಣ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

ಬೆಳ್ತಂಗಡಿ: ಗುರುವಾಯನಕೆರೆ ಕೆರೆಯ ಸಮೀಪ ರಾಜ್ಯ ಹೆದ್ದಾರಿಯ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು,ವಾಹನ ಸವಾರರು ಪ್ರತಿದಿನ ಸಂಕಷ್ಟ ಅನುಭವಿಸುವಂತಾಗಿದೆ. ರಸ್ತೆಯಲ್ಲಿ ಉಂಟಾಗಿರುವ ದೊಡ್ಡ ದೊಡ್ಡ ಹೊಂಡಗಳಿಂದಾಗಿ ವಾಹನಗಳನ್ನು ಚಲಾಯಿಸುವುದು ಸವಾಲಾಗಿ ಪರಿಣಮಿಸಿದ್ದು, ಅಪಘಾತದ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಗುಂಡಿಗಳನ್ನು ತಪ್ಪಿಸಲು ವಾಹನ ಸವಾರರು ಹರಸಾಹಸ ಪಡುತ್ತಿದ್ದು, ಎದುರಿನಿಂದ ಬರುವ ವಾಹನಗಳಿಗೆ ಜಾಗ ಬಿಡುವ ಸಂದರ್ಭಗಳಲ್ಲಿ ಅಪಾಯದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಕ್ಕೆ ತೆರಳುವ ಸಿಬ್ಬಂದಿ ಹಾಗೂ ಸಾರ್ವಜನಿಕರು ಪ್ರತಿನಿತ್ಯ ಇದೇ ರಸ್ತೆಯನ್ನು ಅವಲಂಬಿಸಿರುವುದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮಳೆ ನೀರು ಹೊಂಡಗಳಲ್ಲಿ ನಿಂತಿರುವುದರಿಂದ ಅವುಗಳ ಆಳ ಅರಿಯಲು ಸಾಧ್ಯವಾಗದೆ ದ್ವಿಚಕ್ರ, ಕಾರುಗಳ ವಾಹನ ಸವಾರರು ಹೆಚ್ಚಾಗಿ ಅಪಾಯಕ್ಕೆ ಸಿಲುಕುತ್ತಿದ್ದಾರೆ. ಈ ರಸ್ತೆ ಮೂಲಕ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದರೂ, ಸಂಬಂಧಪಟ್ಟ ಇಲಾಖೆ ಇದುವರೆಗೆ ಶಾಶ್ವತ ದುರಸ್ತಿ ಕಾಮಗಾರಿ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಗಮನಹರಿಸಿ,ರಸ್ತೆ ದುರಸ್ತಿಗೊಳಿಸಿ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಭಾರೀ ಮಳೆ ಹಿನ್ನೆಲೆ: ನಾಳೆ(ಜು.17)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya
error: Content is protected !!