July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ ಸಭೆಯು ಶಾಲೆಯ ನಿರ್ದೇಶಕ ವಂ.ಫಾ.ವಿನೋದ್ ರವರ ಅಧ್ಯಕ್ಷತೆಯಲ್ಲಿ ಮುಖ್ಯ ಶಿಕ್ಷಕಿ ಹಾಗೂ ಪೋಷಕರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ಸಮಯ ಪಾಲನೆ ಹಾಗೂ ಪೋಷಕರ ಸಹಭಾಗಿತ್ವದ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಶಾಲೆಯ ನಿಯಮಾವಳಿ, ಮಕ್ಕಳ ದೈನಂದಿನ ದಿನಚರಿ, ವೈಯಕ್ತಿಕ ಸ್ವಚ್ಛತೆ, ಸಮವಸ್ತ್ರ ಧಾರಣೆ ಹಾಗೂ ಶಾಲೆಗೆ ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಪೋಷಕರಿಗೆ ತಿಳಿಸಲಾಯಿತು.

ಅನಾರೋಗ್ಯದ ಸಂದರ್ಭದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಹಾಗೂ ವೈದ್ಯರ ಸಲಹೆಯಂತೆ ಚಿಕಿತ್ಸೆ ನೀಡುವಂತೆ ಸೂಚಿಸಲಾಯಿತು. ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಸ್ಪೀಚ್ ಥೆರಪಿ, ಫಿಸಿಯೋಥೆರಪಿ, ಬಿಹೇವಿಯರಲ್ ಥೆರಪಿ, ಕೌನ್ಸೆಲಿಂಗ್, ದೈಹಿಕ ಶಿಕ್ಷಣ, ಕಂಪ್ಯೂಟರ್ ಶಿಕ್ಷಣ, ನೃತ್ಯ, ಸಂಗೀತ, ಕ್ರಾಫ್ಟ್ ತರಬೇತಿ ಹಾಗೂ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ಸೌಲಭ್ಯಗಳ ಕುರಿತು ವಿವರಿಸಲಾಯಿತು.

ಮಕ್ಕಳ ವೈಯಕ್ತಿಕ ಸ್ವಚ್ಛತೆ, ಉಗುರು ಹಾಗೂ ಕೂದಲಿನ ಸ್ವಚ್ಛತೆ ಕಾಪಾಡುವುದು, ಶಾಲಾ ವಾಹನದ ನಿಯಮಗಳನ್ನು ಪಾಲಿಸುವುದು ಹಾಗೂ ಮಕ್ಕಳಿಗೆ ಅಗತ್ಯ ಔಷಧಿಗಳನ್ನು ಶಾಲೆಗೆ ನೀಡುವ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಯಿತು.

ಪೋಷಕರು ತಮ್ಮ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ಹಂಚಿಕೊಂಡು, ಮಕ್ಕಳ ಸಮಗ್ರ ಬೆಳವಣಿಗೆಗಾಗಿ ಶಾಲೆಯೊಂದಿಗೆ ಕೈಜೋಡಿಸುವ ಭರವಸೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ದಿವ್ಯ ನೆರವೇರಿಸಿದರು.

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!