July 22, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಸ್ ನಲ್ಲಿ ಮೊಬೈಲ್ ಕಳ್ಳತನ

ಬೆಳ್ತಂಗಡಿ : ಬಸ್ ಗಳಲ್ಲಿ ಮೊಬೈಲ್ ಕಳ್ಳತನ ಮಾಡಿದ ಘಟನೆ ಬುಧವಾರ ಸಂಜೆ ನಡೆದಿದೆ. ಉಜಿರೆಯಿಂದ ಚಾರ್ಮಾಡಿ ಮೂಲಕ ಸಂಚರಿಸುವ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಕಡೆ ಸಂಚರಿಸುವ ಬಸ್ ಗಳಲ್ಲಿ 3 ಮಂದಿಯ ಮೊಬೈಲ್ ಕಳ್ಳತನವಾಗಿದೆ.ಸಂಜೆ ಹೊತ್ತು ಬಸ್ ಗಳಲ್ಲಿ ವಿಪರೀತ ರಶ್ ಇರುತ್ತದೆ. ಈ ವೇಳೆ ಮೊಬೈಲ್ ಕಳ್ಳತನ ನಡೆದಿದ್ದು,ಎರಡು ಬಸ್ ಗಳಲ್ಲಿ ಕಕ್ಕಿಂಜೆ ತಲುಪಿದ ವೇಳೆ ಮೊಬೈಲ್ ಬ್ಯಾಗ್ ಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಮೊಬೈಲ್ ಕಳೆದುಕೊಂಡವರು ಯುವತಿಯರಾಗಿದ್ದು ಎಲ್ಲರೂ ಖಾಸಗಿ ಉದ್ಯೋಗಿಗಳಾಗಿದ್ದಾರೆ. ಈ ವೇಳೆ ಕಕ್ಕಿಂಜೆಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ತಪಾಸಣೆ ಮಾಡಿದ್ದರೂ ಕಳ್ಳತನವಾದ ಮೊಬೈಲ್ ಗಳು ಪತ್ತೆಯಾಗಿಲ್ಲ. ಉಜಿರೆಯಲ್ಲಿ ಬಸ್ ಹತ್ತುವ ವೇಳೆ ವಿಪರೀತ ರಶ್ ಮಧ್ಯೆ ಮೊಬೈಲ್ ಗಳನ್ನು ಕಳ್ಳತನ ನಡೆಸಿರುವ ಸಾಧ್ಯತೆಯಿದ್ದು,ಇದರ ಹಿಂದೆ ಮೊಬೈಲ್ ಕಳ್ಳರ ತಂಡ ಸಕ್ರಿಯವಾಗಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಬಸ್ ನಿರ್ವಾಹಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡುವಂತೆ ಮೊಬೈಲ್ ಕಳೆದುಕೊಂಡವರಿಗೆ ತಿಳಿಸಿದ್ದಾರೆ.

Related posts

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಬರೆಂಗಾಯ ಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya
error: Content is protected !!