September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕ ಮುಖ್ಯಚುನಾವಣಾಧಿಕಾರಿಗಳು ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಬೆಳ್ತಂಗಡಿ ತಾಲೂಕು ಪಂಚಾಯತ್ ಸ್ವೀಪ್ ಸಮಿತಿ, ಮಹಾತ್ಮ ಗಾಂಧಿ ಮಡಂತ್ಯಾರು ಗ್ರಾಮಪಂಚಾಯತ್, ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ರೋಟರಿ ಕ್ಲಬ್ ಮಡಂತ್ಯಾರು, ಜೆಸಿಐ ಮಡಂತ್ಯಾರು, ವರ್ತಕರ ಸಂಘ ಮಡಂತ್ಯಾರು ಇವರ ಸಹಯೋಗದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026 (Special Intensive Revision – SIR) ಕಾರ್ಯಕ್ರಮದ ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಹಾಗೂ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯ ನಿರ್ವಾಹಣಾಧಿಕಾರಿ ಭವಾನಿ‌ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ ಪಿ, ಪಂಚಾಯತ್ ಕಾರ್ಯದರ್ಶಿ ಉದಯಕುಮಾರ್, ಸೆಕ್ರೇಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲರು ಅಲೆಕ್ಸ್ ಐವನ್ ಸಿಕ್ವೇರಾ, ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ಪ್ರಾಂಶುಪಾಲರು ಮಾಧವ, ರೋಟರಿ ಕ್ಲಬ್ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಗ್ರಾಮ ಆಡಳಿತಾಧಿಕಾರಿ ಲಿಂಗರಾಜ್ ಪೂಜಾರಿ, ಗೋಪಾಲಕೃಷ್ಣ ಕೆ, ತುಳಸಿದಾಸ್ ಪ್ಯೆ, ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಾಸ್ಟರ್ ಟ್ರೈನರ್ ಧರಣೇಂದ್ರ ಕೆ ಕಾರ್ಯಕ್ರಮ ಮಾಹಿತಿ ನೀಡಿದರು

Related posts

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಕಾರ್ಫ್ ದಿನ ಆಚರಣೆ

Suddi Udaya
error: Content is protected !!