July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ದಲಿತ ಚಳವಳಿಯನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕ ಎಂ ದೇವದಾಸ್ ಅವರ ನಿಧನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಗೆ ತುಂಬಲಾಗದ ನಷ್ಟ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಳ್ತಂಗಡಿ ತಾಲೂಕು ಸಮಿತಿ ಸಂತಾಪ ಸೂಚಿಸಿದೆ.

ರಾಜ್ಯದ ದಲಿತ ಚಳವಳಿಯ ಹಿರಿಯ ಕೊಂಡಿಯಾಗಿರುವ ದೇವದಾಸ್ ರವರ ನಿಧನ ಇಡೀ ಚಳವಳಿಗೆ ದುಃಖವನ್ನು ತಂದಿದೆ. ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಪ್ರಗತಿಪರ ಚಳವಳಿಗೂ ಅಪಾರ ಕೊಡುಗೆ ನೀಡಿದ್ದಾರೆ. ಅವರ ಕುಟುಂಬದ ದುಃಖದಲ್ಲಿ ದಲಿತ ಸಂಘರ್ಷ ಸಮಿತಿಯ ಎಲ್ಲಾ ಕಾರ್ಯಕರ್ತರು , ಪದಾಧಿಕಾರಿಗಳು ಭಾಗಿಯಾಗಿದ್ದೇವೆ ಎಂದು ದಸಂಸ(ಅಂಬೇಡ್ಕರ್ ವಾದ) ದ ಮೈಸೂರು ವಿಭಾಗ ಸಂ ಸಂಚಾಲಕ ಬಿ.ಕೆ ವಸಂತ , ತಾಲೂಕು ಸಂಚಾಲಕ ರಮೇಶ್ ಆರ್ , ಪದಾಧಿಕಾರಿಗಳಾದ ಶೇಖರ್ ಕುಕ್ಕೇಡಿ , ವೆಂಕಣ್ಣ ಕೊಯ್ಯೂರು , ಶ್ರೀಧರ್ ಕಳೆಂಜ , ನೇಮಿರಾಜ್ , ನಾರಾಯಣ ಪುದುವೆಟ್ಟು ಕೆ.ನೇಮಿರಾಜ್ ಕಿಲ್ಲೂರು , ಶೇಖರ್ ಕಣಿಯೂರು , ದಲಿತ ನಾಯಕರುಗಳಾದ ಸಂಜೀವ ಆರ್ , ಪ್ರಭಾಕರ್ ಶಾಂತಿಗೋಡು , ಚೆನ್ನಕೇಶವ , ಅಚುಶ್ರೀ ಬಾಂಗೇರು , ಶೇಖರ್ ಲಾಯಿಲ ಮಲೆಕುಡಿಯ ಸಂಘದ ಮುಖಂಡ ಜಯಾನಂದ ಪಿಲಿಕಲ ಸಂತಾಪ ಸೂಚಿಸಿದ್ದಾರೆ ‌.

Related posts

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya

ಸೇವಾ ನಿವೃತ್ತಿ ಅಂಗವಾಗಿ ಉಷಾ ವಿ. ರವರಿಗೆ ಬೀಳ್ಕೊಡುಗೆ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಬೆಳ್ತಂಗಡಿ ಕೋಟಿ- ಚೆನ್ನಯ ಕ್ರೀಡಾಕೂಟ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ ನಿಟ್ಟಡೆ ಸಮಗ್ರ ಚಾಂಪಿಯನ್

Suddi Udaya

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಅಮೋಘ ಸಾಧನೆ: ಧಾರವಾಡ ಐಐಟಿಯಲ್ಲಿ ಪ್ರವೇಶಾತಿ ಗಿಟ್ಟಿಸಿಕೊಂಡ ಬೆಳ್ತಂಗಡಿಯ ಅಚಿಂತ್ಯದಾಸ್

Suddi Udaya
error: Content is protected !!