September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

ಉಜಿರೆ: “ದೈನಂದಿನ ಜೀವನದ ಸರಳ ವ್ಯಾಪಾರ-ವಹಿವಾಟಿನಿಂದ ಹಿಡಿದು ಬಾಹ್ಯಾಕಾಶ ತಂತ್ರಜ್ಞಾನದವರೆಗೆ ಪ್ರತಿಯೊಂದು ರಂಗದಲ್ಲೂ ಗಣಿತದ ಪಾತ್ರ ಅತ್ಯಂತ ಅನಿವಾರ್ಯವಾಗಿದೆ,” ಎಂದು ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ E&C ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಮಿತ್ ಕೆ. ಜೈನ್ ಹೇಳಿದರು.

ಅವರು ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಗಣಿತ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ‘ಸಿಗ್ಮಾ’ ಅಸೋಸಿಯೇಷನ್-ನ ಉದ್ಘಾಟನೆ ಮಾಡಿ ನಂತರ “ಖರೀದಿಯಿಂದ ಬಾಹ್ಯಾಕಾಶ ಎಂಜಿನಿಯರಿಂಗ್‌ವರೆಗೆ ಗಣಿತದ ಪಾತ್ರ” ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ನೀಡಿದರು.

ಈ ವೇಳೆ ದೈನಂದಿನ ಜೀವನದಲ್ಲಿ ಗಣಿತದ ಅನ್ವಯಿಕತೆ, ತಾಂತ್ರಿಕ ಪ್ರಗತಿಯಲ್ಲಿ ಅದರ ಕೊಡುಗೆ ಹಾಗೂ ಗಣಿತ ಕಲಿಕೆಯಿಂದ ದೊರೆಯುವ ಉದ್ಯೋಗಾವಕಾಶಗಳ ಕುರಿತು ಪ್ರಾಯೋಗಿಕ ಉದಾಹರಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.


ಇ-ಮ್ಯಾಗಝಿನ್ ಬಿಡುಗಡೆ : ಇದೇ ಸಂದರ್ಭದಲ್ಲಿ ಗಣಿತ ವಿಭಾಗದ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಹಾಗೂ ಗಣಿತಾಸಕ್ತಿಯಿಂದ ಸಿದ್ಧಪಡಿಸಿದ ಇ- ಮ್ಯಾಗಝಿನ್ ಹಾಗೂ ಭಿತ್ತಿ ಪತ್ರಿಕೆಗಳನ್ನು ಬಿಡುಗಡೆಗೊಳಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣಿತ ವಿಭಾಗದ ಮುಖ್ಯಸ್ಥ ಹಾಗೂ ಕಾಲೇಜಿನ ಪರೀಕ್ಷಾಂಗದ ಕುಲಸಚಿವರಾದ ಗಣೇಶ್ ನಾಯಕ್ ಬಿ. ವಹಿಸಿದ್ದರು. ವಿದ್ಯಾರ್ಥಿನಿ ಕೃತಿ ಪ್ರಾರ್ಥಿಸಿದರು. ಶಿಲ್ಪಾ ಸ್ವಾಗತಿಸಿ, ವಿದ್ಯಾರ್ಥಿನಿ ನಮ್ರತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya
error: Content is protected !!