September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ ಸಭೆಯು ಶಾಲೆಯ ನಿರ್ದೇಶಕ ವಂ.ಫಾ.ವಿನೋದ್ ರವರ ಅಧ್ಯಕ್ಷತೆಯಲ್ಲಿ ಮುಖ್ಯ ಶಿಕ್ಷಕಿ ಹಾಗೂ ಪೋಷಕರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ಸಮಯ ಪಾಲನೆ ಹಾಗೂ ಪೋಷಕರ ಸಹಭಾಗಿತ್ವದ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಶಾಲೆಯ ನಿಯಮಾವಳಿ, ಮಕ್ಕಳ ದೈನಂದಿನ ದಿನಚರಿ, ವೈಯಕ್ತಿಕ ಸ್ವಚ್ಛತೆ, ಸಮವಸ್ತ್ರ ಧಾರಣೆ ಹಾಗೂ ಶಾಲೆಗೆ ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಪೋಷಕರಿಗೆ ತಿಳಿಸಲಾಯಿತು.

ಅನಾರೋಗ್ಯದ ಸಂದರ್ಭದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಹಾಗೂ ವೈದ್ಯರ ಸಲಹೆಯಂತೆ ಚಿಕಿತ್ಸೆ ನೀಡುವಂತೆ ಸೂಚಿಸಲಾಯಿತು. ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಸ್ಪೀಚ್ ಥೆರಪಿ, ಫಿಸಿಯೋಥೆರಪಿ, ಬಿಹೇವಿಯರಲ್ ಥೆರಪಿ, ಕೌನ್ಸೆಲಿಂಗ್, ದೈಹಿಕ ಶಿಕ್ಷಣ, ಕಂಪ್ಯೂಟರ್ ಶಿಕ್ಷಣ, ನೃತ್ಯ, ಸಂಗೀತ, ಕ್ರಾಫ್ಟ್ ತರಬೇತಿ ಹಾಗೂ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ಸೌಲಭ್ಯಗಳ ಕುರಿತು ವಿವರಿಸಲಾಯಿತು.

ಮಕ್ಕಳ ವೈಯಕ್ತಿಕ ಸ್ವಚ್ಛತೆ, ಉಗುರು ಹಾಗೂ ಕೂದಲಿನ ಸ್ವಚ್ಛತೆ ಕಾಪಾಡುವುದು, ಶಾಲಾ ವಾಹನದ ನಿಯಮಗಳನ್ನು ಪಾಲಿಸುವುದು ಹಾಗೂ ಮಕ್ಕಳಿಗೆ ಅಗತ್ಯ ಔಷಧಿಗಳನ್ನು ಶಾಲೆಗೆ ನೀಡುವ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಯಿತು.

ಪೋಷಕರು ತಮ್ಮ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ಹಂಚಿಕೊಂಡು, ಮಕ್ಕಳ ಸಮಗ್ರ ಬೆಳವಣಿಗೆಗಾಗಿ ಶಾಲೆಯೊಂದಿಗೆ ಕೈಜೋಡಿಸುವ ಭರವಸೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ದಿವ್ಯ ನೆರವೇರಿಸಿದರು.

Related posts

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ವೇಣೂರು ಎಕ್ಸೆಲ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ-ಕ್ರೀಡೆ ದೈಹಿಕ–ಮಾನಸಿಕ ಕ್ಷಮತೆ ಹೆಚ್ಚಿಸುತ್ತದೆ: ಸುಮಂತ್ ಕುಮಾರ್ ಜೈನ್

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!