July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಸ್ ನಲ್ಲಿ ಮೊಬೈಲ್ ಕಳ್ಳತನ

ಬೆಳ್ತಂಗಡಿ : ಬಸ್ ಗಳಲ್ಲಿ ಮೊಬೈಲ್ ಕಳ್ಳತನ ಮಾಡಿದ ಘಟನೆ ಬುಧವಾರ ಸಂಜೆ ನಡೆದಿದೆ. ಉಜಿರೆಯಿಂದ ಚಾರ್ಮಾಡಿ ಮೂಲಕ ಸಂಚರಿಸುವ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಕಡೆ ಸಂಚರಿಸುವ ಬಸ್ ಗಳಲ್ಲಿ 3 ಮಂದಿಯ ಮೊಬೈಲ್ ಕಳ್ಳತನವಾಗಿದೆ.ಸಂಜೆ ಹೊತ್ತು ಬಸ್ ಗಳಲ್ಲಿ ವಿಪರೀತ ರಶ್ ಇರುತ್ತದೆ. ಈ ವೇಳೆ ಮೊಬೈಲ್ ಕಳ್ಳತನ ನಡೆದಿದ್ದು,ಎರಡು ಬಸ್ ಗಳಲ್ಲಿ ಕಕ್ಕಿಂಜೆ ತಲುಪಿದ ವೇಳೆ ಮೊಬೈಲ್ ಬ್ಯಾಗ್ ಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಮೊಬೈಲ್ ಕಳೆದುಕೊಂಡವರು ಯುವತಿಯರಾಗಿದ್ದು ಎಲ್ಲರೂ ಖಾಸಗಿ ಉದ್ಯೋಗಿಗಳಾಗಿದ್ದಾರೆ. ಈ ವೇಳೆ ಕಕ್ಕಿಂಜೆಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ತಪಾಸಣೆ ಮಾಡಿದ್ದರೂ ಕಳ್ಳತನವಾದ ಮೊಬೈಲ್ ಗಳು ಪತ್ತೆಯಾಗಿಲ್ಲ. ಉಜಿರೆಯಲ್ಲಿ ಬಸ್ ಹತ್ತುವ ವೇಳೆ ವಿಪರೀತ ರಶ್ ಮಧ್ಯೆ ಮೊಬೈಲ್ ಗಳನ್ನು ಕಳ್ಳತನ ನಡೆಸಿರುವ ಸಾಧ್ಯತೆಯಿದ್ದು,ಇದರ ಹಿಂದೆ ಮೊಬೈಲ್ ಕಳ್ಳರ ತಂಡ ಸಕ್ರಿಯವಾಗಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಬಸ್ ನಿರ್ವಾಹಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡುವಂತೆ ಮೊಬೈಲ್ ಕಳೆದುಕೊಂಡವರಿಗೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!