July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿದಾಸ ಗಾಂಭೀರ ಅವರಿಗೆ ನರೇಂದ್ರ ಕುಮಾರ್ ಸಂಸ್ಮರಣಾ ಪ್ರಶಸ್ತಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಸದಸ್ಯರಾಗಿ, ಯಕ್ಷಭಾರತಿಯ ಉಪಾಧ್ಯಕ್ಷರಾಗಿ ನಿರಂತರ ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ಹರಿದಾಸ ಗಾಂಭೀರ ಧರ್ಮಸ್ಥಳ ಅವರು ನಿವೃತ್ತ ಕ್ರೀಡಾ ಶಿಕ್ಷಕ, ಕಲಾವಿದ ,ಕಲಾಪೋಷಕ ದಿ| ನರೇಂದ್ರಕುಮಾರ್ ಅವರ ಸಂಸ್ಮರಣಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಆ 2 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಯಕ್ಷಭಾರತಿ ಸಂಯೋಜನೆಯಲ್ಲಿ ನಡೆಯಲಿರುವ ಗೋವಿಂದ ನಮನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ನರೇಂದ್ರ ಮಾಸ್ಟರ್ ಅವರ ಶಿಷ್ಯನಾಗಿ,ಬಾಲ್ಯದಲ್ಲಿ ಕ್ರಿಕೆಟ್,ಕೋಕೋ ,ಕಬಡ್ಡಿಯಲ್ಲಿ ಉತ್ತಮ ಆಟಗಾರರಾಗಿ ಹರಿದಾಸ ಗಾಂಭೀರ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಯಕ್ಷಗಾನ ತಾಳಮದ್ದಳೆಯ ಅರ್ಥಧಾರಿಯಾಗಿ ತಮ್ಮ ಮಾತಿನ ವೈಖರಿಯಿಂದ ಎಲ್ಲರ ಅಭಿಮಾನ, ಮೆಚ್ಚುಗೆ ಗಳಿಸಿದ್ದರು. ಪ್ರತಿ ವರ್ಷ ಶ್ರೀ ಕ್ಷೇತ್ರದಲ್ಲಿ ನಡೆಯುವ ಪುರಾಣ ವಾಚನ-ಪ್ರವಚನ ಕಾರ್ಯಕ್ರಮದಲ್ಲಿ ಕಳೆದ ಮೂರುವರೆ ದಶಕಕ್ಕಿಂತಲೂ ಹೆಚ್ಚು ಕಾಲ ಭಾಗವಹಿಸಿದ ಹಿರಿಯೆ ಅವರದು.

ರಾಜಕೀಯ ,ಸಹಕಾರ ಹಾಗೂ ಸೇವಾ ಕ್ಷೇತ್ರದಲ್ಲೂ ಅವರು ಸಮರ್ಪಣಾ ಭಾವದಿಂದ ತನ್ನನ್ನು ತೊಡಗಿಸಿಕೊಂಡವರು .ಯಕ್ಷಗಾನ ಕಲಾಪೋಷಕರಾಗಿ ಹಲವಾರು ಯಕ್ಷಗಾನ ಕಾರ್ಯಕ್ರಮಗಳಿಗೆ ಪೂ ರ್ಣ ಸಹಕಾರ ನೀಡುತ್ತಾ ಬಂದವರು. ನರೇಂದ್ರ ಮಾಸ್ಟರ್ ಅವರ ಆಪ್ತ ಶಿಷ್ಯರಲ್ಲಿ ಹರಿದಾಸ ಗಾಂಭೀರರೂ ಓರ್ವರಾಗಿ ನಿಕಟ ಸಂಪರ್ಕ ಹೊಂದಿದ್ದರು. ನರೇಂದ್ರಕುಮಾರ್ ಅವರ ಹೆಸರಿನ ಚೊಚ್ಚಲ ಪ್ರಶಸ್ತಿ ಗೆ ಹರಿದಾಸ ಗಾಂಭೀರ ಅವರ ಆಯ್ಕೆ ಅರ್ಥಪೂರ್ಣ ಹಾಗೂ ಸಮಯೋಚಿತವಾದುದು. .

Related posts

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!