ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಚಿರತೆ: ವಾಹನ ಸವಾರರಲ್ಲಿ ಆತಂಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಬುಧವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು ವಾಹನ ಸವಾರರಲ್ಲಿ ಆತಂಕ ಎದುರಾಗಿದೆ.


ಘಾಟಿಯ ಹನ್ನೊಂದನೇ ತಿರುವಿನ ಬಳಿ, ಬೇಲೂರು 62ಕಿ.ಮೀ.ಮೈಲಿಗಲ್ಲು ಇರುವಲ್ಲಿ ಚಿರತೆ ರಸ್ತೆ ಬದಿ ತಿರುಗಾಟ ನಡೆಸಿದೆ. ಇದಕ್ಕೆ ಮೊದಲು ಚಿರತೆ ತಡೆಗೋಡೆ ಪ್ರದೇಶದಲ್ಲಿ ಕುಳಿತಿತ್ತು. ಈ ಎರಡು ದೃಶ್ಯಗಳನ್ನು ವಾಹನ ಸವಾರರು ಚಿತ್ರೀಕರಿಸಿದ್ದಾರೆ. ಕಳೆದ ತಿಂಗಳು ಇಲ್ಲಿಂದ ಸುಮಾರು 6 ಕಿ.ಮೀ.ದೂರದ ಚಿಕ್ಕಮಗಳೂರು ವಿಭಾಗದ ಘಾಟಿ ಪ್ರದೇಶದ ರಸ್ತೆ ಬದಿಯ ತಡೆಗೋಡೆಯಲ್ಲಿ ಚಿರತೆ ಕಂಡುಬಂದಿತ್ತು. ಬಳಿಕ ಕಳೆದ ವಾರ ಚಾರ್ಮಾಡಿ ಘಾಟಿಗೆ ಸಮೀಪದ ನೆರಿಯದ ರಬ್ಬರ್ ತೋಟದಲ್ಲಿ ಚಿರತೆ ಓಡಾಟ ನಡೆಸಿತ್ತು.


ಚಾರ್ಮಾಡಿ ಘಾಟಿ ಭಾಗದಲ್ಲಿ ಕಾಡಾನೆಗಳ ತಿರುಗಾಟ ಸಾಮಾನ್ಯವಾಗಿದ್ದು ಇದೀಗ ಚಿರತೆಗಳ ಓಡಾಟವು ಕಂಡು ಬರುತ್ತಿದೆ. ಇದಲ್ಲದೆ ಹಲವಾರು ಹಾವುಗಳು ಇಲ್ಲಿನ ರಸ್ತೆ ವ್ಯಾಪ್ತಿಯಲ್ಲಿ ಆಗಾಗ ತಿರುಗಾಟ ನಡೆಸುತ್ತವೆ. ಕಾಡು ಹಂದಿ,ಜಿಂಕೆ ಇತ್ಯಾದಿ ಪ್ರಾಣಿಗಳ ಓಡಾಟ ಇಲ್ಲಿ ಸಾಮಾನ್ಯವಾಗಿದೆ.


ಘಾಟಿ ಭಾಗದಲ್ಲಿ ವಾಹನ ಸವಾರರು ಹೆಚ್ಚಿನ ಮುಂಜಾಗ್ರತೆಯಿಂದ ಸಂಚರಿಸಬೇಕು.ವನ್ಯಜೀವಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿ ಕೊಳ್ಳಬೇಕು. ವನ್ಯಜೀವಿಗಳಿಗೆ ತೊಂದರೆ ಉಂಟು ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Related posts

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya
error: Content is protected !!