July 24, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಚಿರತೆ: ವಾಹನ ಸವಾರರಲ್ಲಿ ಆತಂಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಬುಧವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು ವಾಹನ ಸವಾರರಲ್ಲಿ ಆತಂಕ ಎದುರಾಗಿದೆ.


ಘಾಟಿಯ ಹನ್ನೊಂದನೇ ತಿರುವಿನ ಬಳಿ, ಬೇಲೂರು 62ಕಿ.ಮೀ.ಮೈಲಿಗಲ್ಲು ಇರುವಲ್ಲಿ ಚಿರತೆ ರಸ್ತೆ ಬದಿ ತಿರುಗಾಟ ನಡೆಸಿದೆ. ಇದಕ್ಕೆ ಮೊದಲು ಚಿರತೆ ತಡೆಗೋಡೆ ಪ್ರದೇಶದಲ್ಲಿ ಕುಳಿತಿತ್ತು. ಈ ಎರಡು ದೃಶ್ಯಗಳನ್ನು ವಾಹನ ಸವಾರರು ಚಿತ್ರೀಕರಿಸಿದ್ದಾರೆ. ಕಳೆದ ತಿಂಗಳು ಇಲ್ಲಿಂದ ಸುಮಾರು 6 ಕಿ.ಮೀ.ದೂರದ ಚಿಕ್ಕಮಗಳೂರು ವಿಭಾಗದ ಘಾಟಿ ಪ್ರದೇಶದ ರಸ್ತೆ ಬದಿಯ ತಡೆಗೋಡೆಯಲ್ಲಿ ಚಿರತೆ ಕಂಡುಬಂದಿತ್ತು. ಬಳಿಕ ಕಳೆದ ವಾರ ಚಾರ್ಮಾಡಿ ಘಾಟಿಗೆ ಸಮೀಪದ ನೆರಿಯದ ರಬ್ಬರ್ ತೋಟದಲ್ಲಿ ಚಿರತೆ ಓಡಾಟ ನಡೆಸಿತ್ತು.


ಚಾರ್ಮಾಡಿ ಘಾಟಿ ಭಾಗದಲ್ಲಿ ಕಾಡಾನೆಗಳ ತಿರುಗಾಟ ಸಾಮಾನ್ಯವಾಗಿದ್ದು ಇದೀಗ ಚಿರತೆಗಳ ಓಡಾಟವು ಕಂಡು ಬರುತ್ತಿದೆ. ಇದಲ್ಲದೆ ಹಲವಾರು ಹಾವುಗಳು ಇಲ್ಲಿನ ರಸ್ತೆ ವ್ಯಾಪ್ತಿಯಲ್ಲಿ ಆಗಾಗ ತಿರುಗಾಟ ನಡೆಸುತ್ತವೆ. ಕಾಡು ಹಂದಿ,ಜಿಂಕೆ ಇತ್ಯಾದಿ ಪ್ರಾಣಿಗಳ ಓಡಾಟ ಇಲ್ಲಿ ಸಾಮಾನ್ಯವಾಗಿದೆ.


ಘಾಟಿ ಭಾಗದಲ್ಲಿ ವಾಹನ ಸವಾರರು ಹೆಚ್ಚಿನ ಮುಂಜಾಗ್ರತೆಯಿಂದ ಸಂಚರಿಸಬೇಕು.ವನ್ಯಜೀವಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿ ಕೊಳ್ಳಬೇಕು. ವನ್ಯಜೀವಿಗಳಿಗೆ ತೊಂದರೆ ಉಂಟು ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Related posts

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ ಉದ್ಘಾಟನೆ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!