ಬಂದಾರು: ಮೂಲತಃ ಬಂದಾರು ನಿವಾಸಿ ರಮೇಶ್ ಗೌಡ (48ವ) ಅವರು ಜು.22 ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರು ಹಲವಾರು ವರ್ಷಗಳಿಂದ ಪುತ್ತೂರು ಆದರ್ಶ ಆಸ್ಪತ್ರೆಯ ಬಳಿ ವ್ಯಾಪಾರ ವ್ಯವಹಾರ ನಡೆಸುತ್ತಿದ್ದು ಸೂತ್ರಬೆಟ್ಟುವಿನಲ್ಲಿ ವಾಸ್ತವ್ಯ ಹೊಂದಿದ್ದರು. ಜೊತೆಗೆ ಪತ್ರಿಕಾ ವಿತರಣೆಯನ್ನೂ ಮಾಡುತ್ತಿದ್ದರು. ಜು.22 ರಂದು ರಾತ್ರಿ ಮನೆಯಲ್ಲಿ ಊಟದ ಸಮಯ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಗೆ ಬರುವಷ್ಟರಲ್ಲಿ ಅವರು ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.















