July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಚಿರತೆ: ವಾಹನ ಸವಾರರಲ್ಲಿ ಆತಂಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಬುಧವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು ವಾಹನ ಸವಾರರಲ್ಲಿ ಆತಂಕ ಎದುರಾಗಿದೆ.


ಘಾಟಿಯ ಹನ್ನೊಂದನೇ ತಿರುವಿನ ಬಳಿ, ಬೇಲೂರು 62ಕಿ.ಮೀ.ಮೈಲಿಗಲ್ಲು ಇರುವಲ್ಲಿ ಚಿರತೆ ರಸ್ತೆ ಬದಿ ತಿರುಗಾಟ ನಡೆಸಿದೆ. ಇದಕ್ಕೆ ಮೊದಲು ಚಿರತೆ ತಡೆಗೋಡೆ ಪ್ರದೇಶದಲ್ಲಿ ಕುಳಿತಿತ್ತು. ಈ ಎರಡು ದೃಶ್ಯಗಳನ್ನು ವಾಹನ ಸವಾರರು ಚಿತ್ರೀಕರಿಸಿದ್ದಾರೆ. ಕಳೆದ ತಿಂಗಳು ಇಲ್ಲಿಂದ ಸುಮಾರು 6 ಕಿ.ಮೀ.ದೂರದ ಚಿಕ್ಕಮಗಳೂರು ವಿಭಾಗದ ಘಾಟಿ ಪ್ರದೇಶದ ರಸ್ತೆ ಬದಿಯ ತಡೆಗೋಡೆಯಲ್ಲಿ ಚಿರತೆ ಕಂಡುಬಂದಿತ್ತು. ಬಳಿಕ ಕಳೆದ ವಾರ ಚಾರ್ಮಾಡಿ ಘಾಟಿಗೆ ಸಮೀಪದ ನೆರಿಯದ ರಬ್ಬರ್ ತೋಟದಲ್ಲಿ ಚಿರತೆ ಓಡಾಟ ನಡೆಸಿತ್ತು.


ಚಾರ್ಮಾಡಿ ಘಾಟಿ ಭಾಗದಲ್ಲಿ ಕಾಡಾನೆಗಳ ತಿರುಗಾಟ ಸಾಮಾನ್ಯವಾಗಿದ್ದು ಇದೀಗ ಚಿರತೆಗಳ ಓಡಾಟವು ಕಂಡು ಬರುತ್ತಿದೆ. ಇದಲ್ಲದೆ ಹಲವಾರು ಹಾವುಗಳು ಇಲ್ಲಿನ ರಸ್ತೆ ವ್ಯಾಪ್ತಿಯಲ್ಲಿ ಆಗಾಗ ತಿರುಗಾಟ ನಡೆಸುತ್ತವೆ. ಕಾಡು ಹಂದಿ,ಜಿಂಕೆ ಇತ್ಯಾದಿ ಪ್ರಾಣಿಗಳ ಓಡಾಟ ಇಲ್ಲಿ ಸಾಮಾನ್ಯವಾಗಿದೆ.


ಘಾಟಿ ಭಾಗದಲ್ಲಿ ವಾಹನ ಸವಾರರು ಹೆಚ್ಚಿನ ಮುಂಜಾಗ್ರತೆಯಿಂದ ಸಂಚರಿಸಬೇಕು.ವನ್ಯಜೀವಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿ ಕೊಳ್ಳಬೇಕು. ವನ್ಯಜೀವಿಗಳಿಗೆ ತೊಂದರೆ ಉಂಟು ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya
error: Content is protected !!