September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ: ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ಪ್ರತಿಭಟನೆ

ಬೆಳ್ತಂಗಡಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ನಡೆದ ಲಾಠಿ ಚಾರ್ಜ್ ಹಾಗೂ ರಾಹುಲ್ ಗಾಂಧಿಯವರ ಬಂಧನದ ವಿರುದ್ಧ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಜು.23ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ಅವರು “NEET ಪ್ರಶ್ನೆ ಪತ್ರಿಕೆ ಸೋರಿಕೆ ಕೃತ್ಯವು ಅಕ್ಷಮ್ಯ ಅಪರಾಧವಾಗಿದೆ. ದೆಹಲಿಯಲ್ಲಿ ನ್ಯಾಯ ಕೇಳಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಆರ್ ಎಸ್ ಎಸ್ ಗೂಂಡಾಗಳ ಮೂಲಕ ಹಲ್ಲೆಯನ್ನು ನಡೆಸಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ’ಯವರು ತಕ್ಷಣ ರಾಜೀನಾಮೆ ನೀಡಬೇಕು. ಮುಂದಿನ ದಿನಗಳಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೆ ಆಂದೋಲನ ನಡೆಸಲಿದ್ದೇವೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಕೆಪಿಸಿಸಿ ವಕ್ತಾರ ಅಮೃತ್‌ ಶೆಣೈ, ನಮಿತಾ, ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಮಾಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಪುನೀತ್ ಕುಮಾರ್, ಪ್ರಚಾರ ಸಮಿತಿ ಆಶ್ರಪ್ ನೆರಿಯ, ಝೀನತ್, ಸಂತೋಷ್ ಕುಮಾರ್, ಪ್ರಜ್ವಲ್ ಜೈನ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!