July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಖಂಡನೀಯ -ಕೆ.ಎಂ. ನಾಗೇಶ್ ಕುಮಾರ್ ಗೌಡ

ಬೆಳ್ತಂಗಡಿ: ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವ ಕೆಲಸ ದೇಶದಲ್ಲಿ ನಡೆಯುತ್ತಿದೆ. ಕಾನೂನು ಬದ್ಧವಾಗಿ ನಡೆಯುತ್ತಿರುವ ಹೋರಾಟದಲ್ಲಿ ಆರ್ ಎಸ್ ಎಸ್ ಗೂಂಡಾಗಳನ್ನು ಇಟ್ಟುಕೊಂಡುವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ, ಲಾಠಿ ಚಾರ್ಜ್ ಮಾಡುತ್ತಿರುವುದು ಪ್ರಜಾಪ್ರಭುತ್ವದ ಹಕ್ಕಿನ ದಮನ.

ಈ ಹಿಂದೆ ಜಂತರ್ ಮಂತರ್ ನಲ್ಲಿ ಕೃಷಿ ನೀತಿ ವಿರೋಧಿಸಿ ರೈತರು ನಡೆಸಿದ ಹೋರಾಟದಲ್ಲಿ ಬಿಜೆಪಿ ಗೂಂಡಾಗಳು ರೈತರ ಮೇಲೆ ವಾಹನಗಳನ್ನು ಹರಿಸಿ ಅವರ ಸಾವುಗಳನ್ನು ನೋಡಿ ಬಳಿಕ ಪ್ರಧಾನಿ ಕ್ಷಮೆ ಯಾಚಿಸಿ ಕೃಷಿ ನೀತಿಯನ್ನು ಹಿಂಪಡೆದಿದ್ದರು. ಇದೇ ರೀತಿಯಲ್ಲಿ ದೇಶದಲ್ಲಿ ವಿದ್ಯಾರ್ಥಿಗಳ ಮಾರಣಹೋಮ ನಡೆಯುತ್ತಿದೆ. ಎಲ್ಲಾ ಕಾನೂನು ವ್ಯವಸ್ಥೆಯನ್ನು ತನ್ನ ಕಪಿಮುಷ್ಟಿಯಲ್ಲಿ ಹಿಡಿದು ನಿರಂತರವಾಗಿ ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ಮಾಡುತ್ತಾ ದಮನಕಾರಿ ನೀತಿ ಮುಂದುವರಿಸುತ್ತಿದ್ದಾರೆ ಹಾಗಾಗಿ ದೇಶ ರಕ್ಷಣೆ ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya
error: Content is protected !!